ಬೆಂಗಳೂರು :
ನಗರದಲ್ಲಿ ಬೃಹತ್ ಹಗರಣ ಬಯಲಿಗೆ ಬಂದಿದೆ. ವೈಟ್ ಟ್ಯಾಪಿಂಗ್ ಕಾಮಗಾರಿಯಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರ ಹೆಸರುಗಳು ಕೇಳಿ ಬಂದಿವೆ. ವೈಟ್ ಟ್ಯಾಪಿಂಗ್ನಲ್ಲಿ ಅಕ್ರಮ ನಡೆದಿರುವ ಬಗ್ಗೆ 2017ರಲ್ಲಿ ಬಿಜೆಪಿ ಮುಖಂಡ ಎನ್ಆರ್ ರಮೇಶ್ ತನಿಖಾ ಸಂಸ್ಥೆಗೆ ದೂರು ನೀಡಿದ್ದರು. ಎಸಿಬಿ, ಬಿಎಂಟಿಎಫ್, ಲೋಕಾಯುಕ್ತ ಹಾಗೂ ಎಸಿಎಂಎಂ ಕೋರ್ಟ್ನಲ್ಲಿ ಅವರು ಖಾಸಗಿ ದೂರು ದಾಖಲಿಸಿದ್ದರು.
ವೈಟ್ ಟ್ಯಾಪಿಂಗ್ ಮಾಡಲು ಪ್ರತಿ ಕಿಲೋ ಮೀಟರ್ಗೆ ತಗಲುವ ವೆಚ್ಚ 3 ಕೋಟಿ ರೂಪಾಯಿ. ಆದರೆ, ಪ್ರತಿ ಕಿ.ಮೀಗೆ 11 ಕೋಟಿ ಬಿಲ್ ಮಾಡಲಾಗಿದೆ ಎಂಬುದು ರಮೇಶ್ ಆರೋಪ. ಅಲ್ಲದೆ ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಜೆ.ಜಾರ್ಜ್ ಹಾಗೂ ಜಿ. ಪರಮೇಶ್ವರ್ ದೊಡ್ಡ ಮೊತ್ತದಲ್ಲಿ ಹಣ ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಅಲ್ಲದೆ, ಒಂದು ಹಾಗೂ ಎರಡನೇ ಹಂತದ ಕಾಮಗಾರಿ ತನಿಖೆಗೆ ಆದೇಶಿಸಿರುವ ಬಿಎಸ್ವೈ ಆದೇಶಿಸಿದ್ದಾರೆ. ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/08/50bfd717e6729c7042f1310e755b83b1.jpg)