ರಾಷ್ಟ್ರೀಯತೆಯ ಹೆಸರಿನಲ್ಲಿ ಕಾಶ್ಮೀರ ಜನತೆಯ ಸ್ವಾತಂತ್ರ್ಯಹರಣ : ಪ್ರಿಯಾಂಕ ವಾದ್ರಾ

ನವದೆಹಲಿ:

      ಕಾಶ್ಮೀರದಲ್ಲಿ ಅಲ್ಲಿನ ಜನತೆಗೆ ಪ್ರಜಾಪ್ರಭುತ್ವ ನೀಡುವ ಮೂಲಭೂತ ಹಕ್ಕುಗಳನ್ನು ನಿರಾಕರಿಸುವುದಕ್ಕಿಂತ ‘ರಾಜಕೀಯ ಹಾಗೂ ರಾಷ್ಟ್ರ ವಿರೋಧಿ’ ಕಾರ್ಯ ಇನ್ನೊಂದಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ ಕಾರಿದ್ದಾರೆ.

     ಕಾಶ್ಮೀರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯೊಬ್ಬರು ಹೇಳಿಕೊಳ್ಳುತ್ತಿರುವ ವಿಡಿಯೋ  ಕ್ಲಿಪ್‍ ಹಾಕುವ ಮೂಲಕ ಕಾಶ್ಮೀರಿಗಳ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಕಾರ್ಯ ಮಾಡಿದ್ದಾರೆ. ಕೇಂದ್ರದ ನಿರ್ಭಂದ ಹೇರುವ ರಾಜಕಾರಣ ಇನ್ನೂ ಎಷ್ಟು ದಿನಗಳ ಕಾಲ ಮುಂದುವರಿಯಲಿದೆ? ರಾಷ್ಟ್ರೀಯತೆಯ ಹೆಸರಿನಲ್ಲಿ ಮೂಲೆಗುಂಪುಪಾಗಿರುವ ಮತ್ತು ನೊಂದವರ ಪೈಕಿ ಇದು ಒಂದು ಉದಾಹರಣೆ ಅಷ್ಟೆ ಎಂದು ಹೇಳಿದ್ದಾರೆ

     ಇತ್ತೀಚೆಗೆ ರಾಹುಲ್ ಗಾಂಧಿ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲು ರಾಜ್ಯಪಾಲರ ಆಹ್ವಾನದ ಮೇರೆಗೆ ಮುಂದಾಗಿದ್ದರು . ಆದರೆ, ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲೇ ತಡೆದು ಮರಳಿ ದೆಹಲಿಗೆ ಹೋಗುವಂತೆ ತಾಕೀತು ಮಾಡಲಾಯಿತು. ಇದರ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರತಿರೋಧ ವ್ಯಕ್ತ ಪಡಿಸಿದ್ದರು ಇದೀಗ ಕಾಶ್ಮೀರದಲ್ಲಿ ಪ್ರಜಾಪ್ರಭೂತ್ವ ಉಳಿಸಿ ಎಂಬ ಕೂಗಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದನಿ ಗೂಡಿಸಿದ್ದಾರೆ.

    ರಾಹುಲ್ ಗಾಂಧಿ ಹಾಗೂ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಮಧ್ಯೆ ಟ್ವೀಟ್ ವಾರ್ ನಡೆದಿತ್ತು. ಈ ಮಧ್ಯೆ ರಾಹುಲ್ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ, ನೈಜ ಪರಿಸ್ಥಿತಿಯನ್ನು ಅರಿಯಲು ಯೋಜನೆ ರೂಪಿಸಿದ್ದರು. ಆದರೆ, ರಾಹುಲ್ ಗಾಂಧಿ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರನ್ನು ಅಲ್ಲಿನ ಆಡಳಿತ ಮಂಡಳಿ ಶ್ರೀನಗರ ವಿಮಾನ ನಿಲ್ದಾಣದಿಂದ ಹೊರ ಕಳುಹಿಸಿತ್ತು ಎಂದು ಪ್ರಿಯಾಂಕ ಕಿಡಿಕಾರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link