ಹುಳಿಯಾರು:
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯ ಕಾರೇಹಳ್ಳಿ ಬಳಿ ನಡೆದಿದೆ.
ಬೋರನಕಣಿವೆ ಜಲಾಶಯದ ಹಿನ್ನೀರಿನ ಕಾರೇಹಳ್ಳಿ ಬಳಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಹುಳಿಯಾರು ಪಿಎಸ್ಐ ವಿಜಯಕುಮಾರ್ ಅವರ ನೇತೃತ್ವದ ತಂಡ ದಾಳಿ ಮಾಡಿದೆ.ಪೊಲೀಸರನ್ನು ಕಂಡ ಕೂಡಲೇ ಟ್ರಾಕ್ಟರ್ ಅನ್ನು ಅಲ್ಲಿಯೇ ಬಿಟ್ಟು ಡ್ರೈವರ್ ಹಾಗೂ ಕೂಲಿ ಕಾರ್ಮಿಕರು ಪರಾರಿಯಾಗಿದ್ದಾರೆ. ಹಾಗಾಗಿ ಟ್ರಾಕ್ಟರ್ ವಶಕ್ಕೆ ಪಡೆದು ಟ್ರಾಕ್ಟರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಹುಳಿಯಾರು ಪೊಲೀಸ್ ಠಾಣೆಗೆ ಮರಳು ಸಹಿತ ಟ್ರಾಕ್ಟರ್ ಸೀಜ್ ಮಾಡಿ ತಂದಿದ್ದು ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
