ಬೆಂಗಳೂರು
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಮುಖ್ಯ ಆರೋಪಿ ಮುಹ್ಮದ್ ಮನ್ಸೂರ್ ಖಾನ್ ನನ್ನು ಮತ್ತೆ ಸೆ.30ರ ವರೆಗೆ ಸಿಬಿಐ ವಶಕ್ಕೆ ನೀಡಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಶುಕ್ರವಾರ ಪ್ರಮುಖ ಆರೋಪಿ ಮನ್ಸೂರ್ ಖಾನ್, ನಿಜಾಮುದ್ದೀನ್, ನಾಸೀರ್ ಹುಸೇನ್ ಹಾಗೂ ನವೀದ್ ಅಹ್ಮದ್ ಅವರ ಸಿಬಿಐ ಕಸ್ಟಡಿ ಅಂತ್ಯಗೊಂಡಿತ್ತು. ಹೀಗಾಗಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಮನ್ಸೂರ್ ಖಾನ್ ಮತ್ತು ನವೀದ್ ಅಹ್ಮದ್ನನ್ನು ಮತ್ತೆ ಸೆ.30ರ ವರೆಗೆ ಸಿಬಿಐ ಕಸ್ಟಡಿಗೆ ನೀಡಬೇಕು ಎಂದು ಆದೇಶಿಸಿದರು. ಇನ್ನುಳಿದ ನಿಜಾಮುದ್ದೀನ್ ಮತ್ತು ನಾಸೀರ್ ಹುಸೇನ್ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ ಎಂದು ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುರುವಾರ ಎಫ್ಐಆರ್ನಲ್ಲಿ ಹೆಸರಿಸದ ಮತ್ತೊಬ್ಬ ಆರೋಪಿಯ ಹೇಳಿಕೆ ಪಡೆಯಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಮನ್ಸೂರ್ ಹಾಗೂ ನವೀದ್ ಅವರಿಂದ ಅಧಿಕಾರಿಗಳು ಉತ್ತರ ಪಡೆಯಬೇಕಿದೆ. ಆದ್ದರಿಂದ ಅವರಿಬ್ಬರನ್ನೂ ಕಸ್ಟಡಿಗೆ ನೀಡಿ ಎಂದು ಸಿಬಿಐ ಪರ ವಕೀಲ ಸುದರ್ಶನ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/Untitled-1-3.gif)