ಖೋಟಾ‌ ನೋಟು ಚಲಾವಣೆಗೆ ಯತ್ನ: ಓರ್ವನ ಬಂಧನ

ಬೆಂಗಳೂರು:

   ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ, 34 ಲಕ್ಷ ರೂ ಖೋಟಾ ನೋಟು ವಶಪಡಿಸಿಕೊಂಡಿದ್ದಾರೆ.  ಉತ್ತರ ಕರ್ನಾಟಕ ಮೂಲದ ಶ್ರೀಧರ್ ಬಂಧಿತ ಆರೋಪಿ.

  ಬೆಂಗಳೂರು ಹಾಗೂ ನಗರದ ಹೊರವಲಯ ಪ್ರದೇಶಗಳಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಖೋಟಾ ನೋಟು ಚಲಾವಣೆ ಮಾಡಲಾಗುತ್ತಿದೆ ಎಂಬ ಮಾಹಿತಿಯೊಂದು ಮಾದನಾಯಕಹಳ್ಳಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡು ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದರು.

ನಗರ ಹೊರವಲಯದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಶ್ರೀಧರ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಆತನ ಬಳಿ 34 ಲಕ್ಷ ರೂ ಖೋಟಾ ನೋಟು ಪತ್ತೆಯಾಗಿದೆ. ಖೋಟಾ ಎಲ್ಲಿ ತಯಾರಿಕೆ ಆಗುತ್ತಿದೆ, ಈ ತಂಡದಲ್ಲಿ‌ಎಷ್ಟು ಜನ ಭಾಗಿಯಾಗಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link