ಕೇರಳದಲ್ಲಿ ಭಾರಿ ಮಳೆ : ಶಾಲೆಗಳಿಗೆ ರಜೆ..!

ತಿರುವನಂತಪುರಂ

   ಕೇರಳದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದ್ದು ತಿರುವನಂತಪುರಂ ಮತ್ತು ಎರ್ನಾಕುಲಂ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.ಈಶಾನ್ಯ ಮುಂಗಾರು ಚುರುಕುಗೊಳ್ಳುತ್ತಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಎರ್ನಾಕುಲಂ, ತ್ರಿವೇಂಡ್ರಂ, ತ್ರಿಶ್ಶೂರ್, ಪಾಲಕ್ಕಾಡ್, ಮಲ್ಲಪ್ಪುರಂ, ಅಲ್ಫುಝಾ ಮತ್ತು ವಯನಾಡು ಜಿಲ್ಲೆಗಳಲ್ಲಿ ಅ.21 ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಪ್ರಕಟಣೆ ಹೇಳಿದೆ. ಈ ಪ್ರದೇಶಗಳ ಹಲವೆಡೆ 115 ರಿಂದ 204.5 ಮಿಲಿಮೀಟರ್ ಮಳೆಯಾಗಲಿದೆ ಎಂದು ತಿರುವನಂತಪುರ ಹವಾಮಾನ ಇಲಾಖೆ ತಿಳಿಸಿದೆ.

     ಕೊಲ್ಲಂ, ಪಥನಮಿತ್ತ, ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಮಲಪ್ಪುರಂ, ಕೋಜಿಕೋಡೆ, ವಯನಾಡು, ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಅ.23 ಕ್ಕೆ ಮತ್ತು ಕೋಝಿಕೋಡ್ಮ ಮಲ್ಲಪುರಂ, ಕಣ್ಣೂರು, ಕಾಸರಗೋಡು ಜಿಲ್ಲೆಗಳಿಗೆ ಅ.24 ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಪ್ರಕಟಣೆ ವಿವರಿಸಿದೆ.

     ಕೇರಳದ ಕರಾವಳಿ, ಲಕ್ಷದ್ವೀಪಗಳಲ್ಲಿ ಗಂಟೆಗೆ 45 ರಿಂದ 55 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

 

Recent Articles

spot_img

Related Stories

Share via
Copy link