ಎನ್‌ಕೌಂಟರ್‌ : ಮೂವರು ಜೈಷ್ ಉಗ್ರರು ಫಿನಿಷ್!!!

ಶ್ರೀನಗರ: 

      ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನಾಪಡೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರು ಹತರಾಗಿದ್ದಾರೆ.

       ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್‍ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್(ಜೆಎಎಂ) ಉಗ್ರ ಸಂಘಟನೆಗೆ ಸೇರಿದ ಝಾಕಿರ್ ಮೂಸಾ ಉತ್ತರಾಧಿಕಾರಿ ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ (ಎಜಿಹೆಚ್) ಮುಖ್ಯಸ್ಥ ಅಬ್ದುಲ್ ಹಮೀದ್ ಲೆಲ್ಹಾರಿ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. 

      ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಎನ್‍ಕೌಂಟರ್ ಆಗಿ ಪರಿವರ್ತಿಸಿ ದಿಟ್ಟ ಉತ್ತರ ನೀಡುವ ಮೂಲಕ ಮೂರು ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿದೆ.

      ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ಸೇನೆ ವಶಪಡಿಸಿಕೊಂಡಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link