ಭಾರತದ ಪರ ನಿಂತ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ : ಅಲಿ ಅಮೀನ್ ಗಂಡಾಪುರ

ಇಸ್ಲಾಮಾಬಾದ್:

  ಜಮ್ಮು ಕಾಶ್ಮೀರ ವಿಶೇಷ ಸ್ಥಾನ ಮಾನ ರದ್ದತಿ ಕುರಿತಂತೆ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಪಾಕಿಸ್ತಾನ ಮಿಸೈಲ್ ದಾಳಿ ಮಾಡಲು ಸನ್ನದ್ಧವಾಗಿದೆ ಎಂದು ಪಾಕಿಸ್ತಾನದ ಸಚಿವರೊಬ್ಬರು ಹೇಳುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.

   ಕಾಶ್ಮೀರ ವಿಚಾರದಲ್ಲಿ ಏನು ಸಹ ಮಾಡಲಾಗದೆ ಕೈ ಕೈ ಹಿಸುಕಿಕೊಳ್ಳುತ್ತಿರುವ ಪಾಕಿಸ್ತಾನದ ನಾಯಕರು ಮನಸೋ ಇಚ್ಚೆಯಾಗಿ  ನೀಡುವ ಹೇಳಿಕೆಗಳ ಸರಣಿ ಮುಂದುವರೆದಿದೆ, ಇದೀಗ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಪಾಕಿಸ್ತಾನದ ಸಚಿವರೊಬ್ಬರು ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಕ್ಷಿಪಣಿ ಪ್ರಯೋಗ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. 

    ಪಾಕಿಸ್ತಾನದ ಕಾಶ್ಮೀರ ವ್ಯವಹಾರ ಮತ್ತು ಗಿಲ್ಗಿಟ್ ಬಾಲ್ಟಿಸ್ತಾನ್ ಉಸ್ತುವಾರಿ ಸಚಿವ ಅಲಿ ಅಮೀನ್ ಗಂಡಾಪುರ ಇಂತಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ, ಕಾಶ್ಮೀರ ವಿಚಾರವಾಗಿ ಭಾರತವನ್ನು ಬೆಂಬಲಿಸುತ್ತಿರುವ ರಾಷ್ಟ್ರಗಳನ್ನು ನಾವು ಶತ್ರುಗಳು ಎಂದು ಪರಿಗಣಿಸುತ್ತೇವೆ. ಕಣಿವೆಯಲ್ಲಿ ಭಾರತವೇನಾದರೂ ಉದ್ಧಟತನ ತೋರಿಸಿದರೆ ಪಾಕಿಸ್ತಾನ ಯುದ್ಧವನ್ನು ಸಾರಲು ಹಿಂಜರಿಯುವುದಿಲ್ಲ. ಅಲ್ಲದೆ ಭಾರತ ಮತ್ತು ಅದಕ್ಕೆ ಬೆಂಬಲ ನೀಡುವ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link