ಕರ್ತಾರ್ಪುರ:
ಕರ್ತಾಪುರ ಕಾರಿಡಾರ್ ಉದ್ಗಾಟನೆ ಸಮಾರಂಭದಲ್ಲಿ ಮಾತನಾಡಿದ ಇಮ್ರಾನ್ ಖಾನ್ ಕಾಶ್ಮೀರ ಸಮಸ್ಯೆ ಪ್ರಾದೇಶಿಕ ಸಮಸ್ಯೆಯಲ್ಲ ಅದು ಕಣಿವ ರಾಜ್ಯದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯ ವಿಚಾರವಾಗಿದೆ ಎಂದು ಹೇಳುವ ಮೂಲಕ ಮತ್ತೆ ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುವ ಕೆಲಸ ಮಾಡಿದೆ.
ಪಂಜಾಬ್ ನ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ಗೆ ಚಾಲನೆ ನೀಡಿ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರ ವಿಚಾರ ಪ್ರಸ್ತಾಪಿಸುವ ಮೂಲಕ ತನ್ನ ಕುಯುಕ್ತಿಯನ್ನು ಪ್ರದರ್ಶಿಸಿದ್ದಾರೆ.
ಕಾಶ್ಮೀರ ವಿವಾದ 72 ವರ್ಷಗಳಿಂದಲೂ ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರಗಳ ನಡುವಣ ದ್ವೇಷವನ್ನು ಬೆಳೆಸಿದೆ. ಕಾಶ್ಮೀರ ವಿವಾದ ಬಗೆಹರಿಕೆಯಿಂದ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳ ಸಮೃದ್ಧಿ ಹಾಗೂ ಪರಸ್ಪರ ಅಭಿವೃದ್ಧಿಗೆ ಕಾರಣವಾಗಲಿದೆ. ಕಾಶ್ಮೀರ ಜನತೆಗೆ ಭಾರತ ನ್ಯಾಯ ನೀಡಬೇಕು. ಕಾಶ್ಮೀರ ಪ್ರಾದೇಶಿಕ ವಿಚಾರವಲ್ಲ. 80 ಜನರ ಮೇಲಿನ ಮಾನವ ಹಕ್ಕು ಉಲ್ಲಂಘನೆಯ ವಿಚಾರವಾಗಿದೆ. ಕಾಶ್ಮೀರಕ್ಕೆ ನ್ಯಾಯ ಒದಗಿಸಬೇಕು. ಶಾಂತಿ ನೆಲೆಸಬೇಕು ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/imran-khan.gif)