ದಾಬಸ್ ಪೇಟೆ :
ಶಾಸಕ ಶಾಮನೂರು ಶಿವಶಂಕರಪ್ಪ ರವರ ಮಗನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ನೆಲಮಂಗಲದ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಶಾಮನೂರು ಶಿವಶಂಕರಪ್ಪ ಪುತ್ರ ಶಾಮನೂರು ಗಣೇಶ್ ತಮ್ಮ ಚಾಲಕ ಮಂಜುನಾಥ್ ಹಾಗೂ ವೀರೇಶ್ ಎಂಬವರ ಜೊತೆ ತುಮಕೂರು ಮಾರ್ಗವಾಗಿ ಬಿ.ಎಂ.ಡಬ್ಲೂ. ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ನೆಲಮಂಗಲದ ದಾಬಸ್ ಪೇಟೆ ಬಳಿ ಸ್ಕೂಟಿ ಸವಾರ ಬೆಂಗಳೂರಿನ ಯೋಗಾನಂದ್ ಎಂಬವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿ ಸವಾರ ಸಾವನ್ನಪ್ಪಿದ್ದಾನೆ.
ಶಾಮನೂರು ಗಣೇಶ್ ಹಾಗೂ ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
