ನವದೆಹಲಿ:
ಐ ಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಿ ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಡಿಸೆಂಬರ್ 11 ವರೆಗೆ ವಿಸ್ತರಣೆಯಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಚಿಂದಬರಂ ಅವರನ್ನು 14 ದಿನ ವಿಚಾರಣೆ ಒಪ್ಪಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಬುಧವಾರ ದೆಹಲಿ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿತು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅಜಯ್ ಕುಮಾರ್ ಕುಹರ್, ಚಿದಂಬರಂ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 11 ವರೆಗೆ ವಿಸ್ತರಿಸಿ ತೀರ್ಪು ನೀಡಿದರು.
ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ನ ಈ ಹಿರಿಯ ನಾಯಕ ಕಳೆದ ನಾಲ್ಕು ತಿಂಗಳುಗಳಿಂದ ತಿಹಾರ್ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/p-chidambaram.gif)