ಹೊಳಲ್ಕೆರೆ:
ತಾಲ್ಲುಕು ಕಚೇರಿಯ ಮುಂಭಾಗದಲ್ಲಿ 6 ತಿಂಗಳ ಹಿಂದೆಯೇ ಇಂದಿರಾ ಕ್ಯಾಂಟೀನ್ ಕಟ್ಟಡ ಮುಕ್ತಾಯಗೊಂಡಿದ್ದರು ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ವಿನೂತ್ ಪ್ರಿಯಾ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಉಳಿದಿರುವ ಕಾಮಗಾರಿಗು 15 ದಿನದೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡಬೇಕೆಂದು ಪ.ಪಂ. ಮುಖ್ಯಾಧಿಕಾರಿ ವಾಸೀಂ ಅವರಿಗೆ ಆದೇಶ ನೀಡಿದ್ದಾರೆ.
ಪಟ್ಟಣದ ಘನತ್ಯಾಜ್ಯ ವಸ್ತುಗಳ ಸಂಗ್ರಹಣ ಯಾರ್ಡಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ತ್ಯಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೆ ಪಡಿಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.ಕರೆಕಲ್ಲು ದಿಬ್ಬದಲ್ಲಿ 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಓವರ್ ಹೆಡ್ ಟ್ಯಾಂಕ್ನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಉತ್ತಮ ಗುಣ ಮಟ್ಟದ ಕಟ್ಟಡ ಸಾಮಗ್ರಿಗಳನ್ನು ಬಳಕೆ ಮಾಡಬೇಕು ಯಾವುದೇ ಕಾರಣಕ್ಕು ಕಳಪೆ ಕೆಲಸಕ್ಕೆ ಅವಕಾಶ ನೀಡದಂತೆ ಪ.ಪಂ. ಮುಖ್ಯಾಧಿಕಾರಿಗಳು ತೀವ್ರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಬಹಳ ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ಪ.ಪಂಯ ನೂತನ ಕಟ್ಟಡ ನಿರ್ಮಾಣ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ವಿವರಣೆ ಕೇಳಿದರು. ಕಟ್ಟಡದ ಮೂಲ ರೂಪ ರೇಷಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಉತ್ತಮ ಮತ್ತು ಸುವ್ಯವಸ್ಥಿತ ಕಟ್ಟಡ ನಿರ್ಮಾಣ ಆಗಬೇಕು. ಈ ಕಟ್ಟಡದ ನಿರ್ಮಾಣದ ಕಡೆ ಸಂಬಂಧಪಟ್ಟ ಇಂಜಿನಿಯರ್ ಸದಾ ಪರಿಶೀಲನೆ ಮಾಡುವಂತೆ ಸಲಹೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ