ಬೆಂಗಳೂರು
ಉಪ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮತದಾನದ ತಯಾರಿ ಬಗ್ಗೆ ಮಾಹಿತಿ ನೀಡಿದ್ದು, ಉಪ ಚುನಾವಣೆ ಪ್ರಚಾರ ಕಾರ್ಯಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ನಂತರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಲು ಅವಕಾಶವಿದೆ. ಸಂಜೆ 6 ಗಂಟೆಯಿಂದ ಕ್ಷೇತ್ರದ ಹೊರಗಿನವರು ಜಿಲ್ಲೆಯಲ್ಲಿಯೇ ಇರುವಂತಿಲ್ಲ ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ಉಪಚುನಾವಣೆ ಪ್ರಚಾರ ಅಬ್ಬರ ಜೋರಾಗಿದ್ದು, ಘಟಾನುಘಟಿ ನಾಯಕರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. 156 ಪುರುಷರು ಸೇರಿದಂತೆ ಒಟ್ಟು 165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, 9 ರಂದು ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
