ದೆಹಲಿ:
ಕನ್ನಡದ ಹಿರಿಯ ಸಾಹಿತಿಗಳಾದ ಎಸ್.ಎಲ್.ಬೈರಪ್ಪ ಮತ್ತು ಚಂದ್ರಶೇಖರ ಕಂಬಾರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ವಿಜೇತ ಚಂದ್ರಶೇಖರ ಕಂಬಾರ ಹಾಗೂ ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರು ದೆಹಲಿಯಲ್ಲಿ ಮೋದಿ ಅವರನ್ನು ಭೇಟಿ ಆಗಿದ್ದಾರೆ. ಈ ಸಮಯದಲ್ಲಿ ಕಂಬಾರರು ಸಾಹಿತ್ಯ ಕೃತಿಯನ್ನು ಮೋದಿ ಅವರಿಗೆ ನೀಡಿದ್ದಾರೆ.
Yesterday in Parliament, I had the opportunity to meet Padma Shri S. L. Bhyrappa Ji and Jnanpith Award recipient Chandrashekhar Kambara Ji.
Interacting with these intellectual doyens is wonderful. Their strong passion towards literature and culture is clearly visible. pic.twitter.com/g5uvhxT22o
— Narendra Modi (@narendramodi) December 5, 2019
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮೊದಲಿಗೆ ಭೇಟಿ ಆಗಿರುವ ಇಬ್ಬರು ಸಾಹಿತಿಗಳು ನಂತರ ಮೋದಿ ಅವರನ್ನು ಭೇಟಿ ಆಗಿದ್ದಾರೆ. ಜೋಶಿ ಅವರೇ ಸಾಹಿತಿಗಳನ್ನು ಮೋದಿ ಅವರಿಗೆ ಪರಿಚಯಿಸಿಕೊಟ್ಟಿದ್ದಾರೆ. ಈ ಭೇಟಿಯ ಫೋಟೋವನ್ನ ಪ್ರಹ್ಲಾದ್ ಜೋಶಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಪ್ರಹ್ಲಾದ್ ಜೋಶಿ ಅವರು ತಮ್ಮ ಫೇಸ್ಬುಕ್ ಪುಟದಲ್ಲಿಲ್ಲೂ ಈ ಬಗ್ಗೆ ಚಿತ್ರ ಸಹಿತ ಮಾಹಿತಿ ಪ್ರಕಟಿಸಿದ್ದು, ಜೋಶಿ ಅವರು ಇಬ್ಬರು ಸಾಹಿತಿಗಳ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಚಿತ್ರವನ್ನೂ ಪ್ರಕಟಿಸಿದ್ದಾರೆ. ಸಾಹಿತಿಗಳು ಮೋದಿ ಅವರನ್ನು ಭೇಟಿ ಆಗಿರುವ ಕಾರಣ ತಿಳಿದುಬಂದಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ