ಬೆಂಗಳೂರು
ಉಪ ಚುನಾವಣೆ ಬಳಿಕ ಪಕ್ಷ ಹಾಗೂ ಸರ್ಕಾರದ ಮೇಲೆ ಹಿಡಿತ ಸಾಧಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶತ್ರುಗಳ ಆತಂಕವೂ ಹೆಚ್ಚಾಗಿದೆ.ತಮ್ಮ ಕಿರಿಯ ಪುತ್ರ ಬಿವೈ ವಿಜಯೇಂದ್ರ ವರ್ಚಸ್ಸು, ಸಾಮರ್ಥ್ಯ ಕೂಡ ಮುನ್ನೆಲೆಗೆ ಬಂದಿರುವುದು ಯಡಿಯೂರಪ್ಪ ಅವರ ಆತಂಕ ಕ್ಕೆ ಕಾರಣವಾಗಿದೆ.ಹೀಗಾಗಿ ಶತ್ರು ಸಂಹಾರಕ್ಕಾಗಿ ತಮ್ಮ ನಿವಾಸದಲ್ಲಿ ಸುದರ್ಶನ ಹೋಮ ನಡೆಸಿದ್ದಾರೆ.
ಇಂದು ಮುಂಜಾನೆಯಿಂದ ಸತತ ಮೂರು ಗಂಟೆಗಳ ಕಾಲ ಕುಟುಂಬದ ಅರ್ಚಕ ರನ್ನು ಕರೆಸಿ ಯಡಿಯೂರಪ್ಪ ಅವರು ಧವಳಗಿರಿ ನಿವಾಸದಲ್ಲಿ ಸುದರ್ಶನ ನರ ಸಿಂಹ ಹೋಮ ನಡೆಸಿದರು. ಹೋಮದಲ್ಲಿ ಬಿ.ವೈ.ವಿಜಯೇಂದ್ರ ದಂಪತಿ ಮಾತ್ರ ಪಾಲ್ಗೊಂಡಿದ್ದು ವಿಶೇಷ.ಸುದರ್ಶನ ಹೋಮದಲ್ಲಿ ಅಪ್ಪ-ಮಗ ಇಬ್ಬರೂ ಶ್ವೇತ ವರ್ಣದ ರೇಷ್ಮೆ ಪಂಚೆ, ಶಲ್ಯ, ಅಂಗಿ ತೊಟ್ಟು ಭಾಗವಹಿಸಿದರು.ಹೋಮ ನಡೆಸಿದ ಅವಧಿಯಲ್ಲಿ ಧವಳಗಿರಿ ನಿವಾಸಕ್ಕೆ ಯಾವುದೇ ಸಚಿವರು, ಶಾಸಕರು,ಮುಖಂಡ ರು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸ ಲಾಗಿತ್ತು.ಅಷ್ಟೇ ಅಲ್ಲ ಆಪ್ತ ಸಹಾಯಕ ರು,ಅಧಿಕಾರಿಗಳಿಗೂ ಪ್ರವೇಶ ನೀಡರಲಿಲ್ಲ.
ಸುದರ್ಶನ ನರಸಿಂಹ ಹೋಮ ನಡೆಸುವ ಮೂಲಕ ಯಡಿಯೂರಪ್ಪ ತಮಗೆ ಮತ್ತು ಮಗ ವಿಜಯೇಂದ್ರಗೆ ಎದುರಾಗುವ ಶತ್ರು ಸಂಕಷ್ಟಗಳನ್ನು ಪರಿಹರಿಸಿ ಕೊಂಡರು.ಉಳಿದ ಅವಧಿಗೆ ಯಾವ ಅಡೆತಡೆಯೂ ಎದುರಾಗದಂತೆ ಸಂಕಷ್ಟ ನಿವಾರಿಸಿಕೊಂಡಿದ್ದಾರೆ.ಶತ್ರು ನಿಗ್ರಹಕ್ಕಾಗಿ ಯಡಿಯೂರಪ್ಪ ನಡೆಸಿದ ಈ ಹೋಮ ಸದ್ಯ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.
ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮೇಲೆ ಯಡಿಯೂರಪ್ಪ ಅವರ ಬಲ ಪಕ್ಷ ಹಾಗೂ ಸರ್ಕಾರದಲ್ಲಿ ವೃದ್ಧಿಸಿದೆ. ಈಗ ಯಡಿಯೂರಪ್ಪನವರು ಸರ್ಕಾರ ಮತ್ತು ಪಕ್ಷದಲ್ಲಿ ತಮ್ಮ ಹಳೆಯ ವರ್ಚಸ್ಸನ್ನು ಮರಳಿ ಪಡೆದಿದ್ದಾರೆ ಎನ್ನಲಾಗುತ್ತಿದೆ.ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ರಾಜಕೀಯವಾಗಿ ಮತ್ತಷ್ಟು ಪ್ರಮುಖ ಸ್ಥಾನಗಳನ್ನು ಹೊಂದುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/u2O5lhFI_400x400.gif)