ದೆಹಲಿ ಪೆರೆಡ್ ನಲ್ಲಿ ಭಾಗವಹಿಸಲು ಹುಳಿಯಾರಿನ ಹುಡುಗನಿಗೆ ಆಹ್ವಾನ

ಹುಳಿಯಾರು

    ಹಳ್ಳಿ ಹುಡುಗನೊಬ್ಬ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಕ್ಷಿಸಲಿದ್ದಾರೆ.

    ಅಚ್ಚರಿಯಾದರೂ ಇದು ಸತ್ಯ. ಇದೇ ಜನವರಿ 26 ರಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡಿನಲ್ಲಿ ಪಾಲ್ಗೊಳ್ಳುವ ಅವಕಾಶ ಹುಳಿಯಾರು ಸಮೀಪದ ತಿಮ್ಮನಹಳ್ಳಿಯ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿ ಯಶಸ್‍ಗೆ ದೊರೆತಿದೆ.

    ಹುಳಿಯಾರು ಸಮೀಪದ ಹಳ್ಳಿಗಾಡಿನ ತಿಮ್ಮನಹಳ್ಳಿಯ ಕೃಷಿಕರಾದ ದೇವರಾಜು ಹಾಗೂ ನೇತ್ರಾವತಿ ಪುತ್ರನಾದ ಯಶಸ್ ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿ ಎಸ್‍ಎಸ್‍ಎಲ್‍ಸಿ ಮಾಡಿದ ಸಾಧನೆ ಇಡೀ ದೇಶವೇ ಹಳ್ಳಿಯತ್ತ ತಿರುಗಿ ನೋಡುವಂತೆ ಮಾಡಿದ್ದ.

      ಕಳೆದ ಸಾಲಿನ ಸಿಬಿಎಸ್ಸಿ ಹತ್ತನೇ ತರಗತಿಯಲ್ಲಿ 500 ಅಂಕಗಳಿಗೆ 498 ಅಂಕ ಗಳಿಸುವ ಮೂಲಕ ದೇಶದಲ್ಲಿಯೇ ಎರಡನೇ ಸ್ಥಾನ ಪಡೆದು ದಕ್ಷಿಣ ವಲಯ ಹಾಗೂ ರಾಜ್ಯಕ್ಕೆ ಪ್ರಥಮನಾಗಿ ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಹಾಗೂ ತುಮಕೂರು ಜಿಲ್ಲೆ ಸೇರಿದಂತೆ ಹುಳಿಯಾರಿನ ವಿದ್ಯಾವಾರಿಧಿ ಶಾಲೆಗೆ ಕೀರ್ತಿ ತಂದಿದ್ದು ಇದೀಗ ಯಶೋಗಾಥೆ.

      ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಸಚಿವಾಲಯದಿಂದ ಆತನಿಗೆ ಈ ವಿಶೇಷ ಆಹ್ವಾನ ಬಂದಿದೆ. ಕೇವಲ ಶೈಕ್ಷಣಿಕ ಸಾಧನೆಯ ಮೂಲಕವೇ ಹಳ್ಳಿಯಿಂದ ದಿಲ್ಲಿಗೆ ಯಶಸ್ಸಿನ ಪಯಣ ಮಾಡಿರುವ ಯಶಸ್‍ಗೆ ದೊರೆತಿರುವ ಅವಕಾಶಕ್ಕೆ ಹುಳಿಯಾರು, ತಿಮ್ಮನಹಳ್ಳಿಯ ಜನತೆ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

      ಯಶಸ್ ತಂದೆ ದೇವರಾಜು ಕಳೆದ ಹತ್ತು ವರ್ಷದಿಂದ ಹಾಸಿಗೆ ಹಿಡಿದಿದ್ದು ತಾಯಿಯೇ ಎಲ್ಲ ಆಗುಹೋಗುಗಳನ್ನು ಗಮನಿಸುತ್ತಿದ್ದು ಇದರೊಟ್ಟಿಗೆ ತಾಯಿಯ ಸಹೋದರ ರವೀಂದ್ರ ಮಾರ್ಗದರ್ಶನದಿಂದ ಇಂದು ನಾನು ಈ ಮಟ್ಟಕ್ಕೆ ಏರಲು ಸಾಧ್ಯವಾಗಿದೆ ಎಂದು ಸ್ಮರಿಸುವ ಯಶಸ್ ಈಗ ಬೆಂಗಳೂರಿನ ನಾರಾಯಣ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾನೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link