ಚಿಕ್ಕಮಗಳೂರು:
ಚಾರ್ಮಾಡಿ ಘಾಟ್ನಲ್ಲಿ ಇಂದಿನಿಂದ ಲಘು ವಾಹನ ಹಾಗೂ ಮಿನಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾಧಿಕಾರಿಗಳು ಡಾ.ಬಗಾದಿ ಗೌತಮ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಕಾರು, ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್.ಆರ್.ಟಿ.ಸಿ ಬಸ್ಗಲು ಸಂಚಾರ ಆರಂಭಿಸಿದ್ದು, ಘನ ವಾಹನಗಳಾದ ಟ್ಯಾಂಕರ್, ರಾಜಹಂಸ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ವ್ಯವಸ್ಥೆ ಜಾರಿಯಲ್ಲಿದೆ.
ಚಾರ್ಮಾಡಿ ಘಾಟ್ ತಿರುವುಗಳಲ್ಲಿ ಪ್ರತಿಫಲಕ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ತಡೆಗೋಡೆಗಳಿಗೆ ಬಣ್ಣ ಬಳಿಯಲಾಗಿದ್ದು, ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿ ಕಾರಿಗಳು ತಿಳಿಸಿದ್ದಾರೆ.
ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿ (ಲಘು) ವಾಹನಗಳ ಸಂಚಾರ ಆರಂಭವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
