ದೆಹಲಿ :
ಬ್ಯಾಂಕುಗಳಿಗೆ ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿರುವ ಉದ್ಯಮಿ ವಿಜಯ್ ಮಲ್ಯ ಅವರ ಜಪ್ತಿ ಮಾಡಿರುವ ಆಸ್ತಿಯನ್ನು ಹರಾಜು ಹಾಕುವ ಮೂಲಕ ಸಾಲ ವಸೂಲಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಬ್ಯಾಂಕುಗಳಿಗೆ ವಿಶೇಷ ನ್ಯಾಯಾಲಯ (ಪಿಎಂಎಲ್ಎ ನ್ಯಾಯಾಲಯ) ಅನುಮತಿ ನೀಡಿದೆ.
ಈಗಾಗಲೇ 13,000 ಕೋಟಿ ರೂ.ಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಎಸ್ಬಿಐ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಈ ಸೊತ್ತುಗಳನ್ನು ಹರಾಜು ಮಾಡಲಿದೆ. ಮೂಲಗಳ ಪ್ರಕಾರ, ವಶಪಡಿಸಿಕೊಂಡ ಸ್ವತ್ತುಗಳು ಮುಖ್ಯವಾಗಿ ಷೇರುಗಳಂತಹ ಹಣಕಾಸು ಭದ್ರತೆ ಕುರಿತ ದಾಖಲೆಗಳನ್ನು ಒಳಗೊಂಡಿದೆ.
ಈ ಆದೇಶಗಳ ಬಗ್ಗೆ ಸಂಬಂಧಪಟ್ಟವರು ಬಾಂಬೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದಾಗಿದೆ. ಆದರೆ ಜನವರಿ 18 ರ ನಂತರವೇ ಆದೇಶಗಳನ್ನು ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತಿರುವ ವಿಜಯ್ ಮಲ್ಯ ಅವರು ಮಾರ್ಚ್ 2016 ರಲ್ಲಿ ಲಂಡನ್ಗೆ ಪರಾರಿಯಾಗಿದ್ದಾರೆ. 2017 ರಲ್ಲಿ ಅವರನ್ನು ಬಂಧಿಸಲಾಗಿದ್ದರೂ ಜಾಮೀನು ಮೂಲಕ ಬಿಡುಗಡೆಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
