ದಾವಣಗೆರೆ :
ಬಸವ ಕೇಂದ್ರ ಹಾಗೂ ಶ್ರೀಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಜನವರಿ 10, 11 ಹಾಗೂ 12ರಂದು ಮೂರು ದಿನಗಳ ಕಾಲ ನಗರದಲ್ಲಿ ಲಿಂ.ಶ್ರೀಜಯದೇವ ಮುರುಘಾರಾಜೇಂದ್ರ ಮಹಾಸ್ವಮಿ ಗಳವರ 63ನೇ ಸ್ಮರಣೋತ್ಸವ, ಜಯದೇವಶ್ರೀ ಹಾಗೂ ಶೂನ್ಯಪೀಠ ಪ್ರಶಸ್ತಿ ಪ್ರದಾನ ಸಮಾರಂಭ, ಸಹಜ ಶಿವಯೋಗ ಮತ್ತು ಶರಣ ಸಂಸ್ಕøತಿ ಉತ್ಸವ ಏರ್ಪಡಿಸಲಾಗಿದೆ.
ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀಶಿವಮೂರ್ತಿ ಮುರುಘಾ ಶರಣರು, ಜ.10ರಂದು ಬೆಳಿಗ್ಗೆ 7.30ಕ್ಕೆ ಪರಿಸರವಾದಿ ಸಾಲುಮರದ ವೀರಾಚಾರಿ ಬಸವತತ್ವ ಧ್ವಜಾರೋಹಣ ನೆರವೇರಿಸಲಿದ್ದಾರೆ.
7.45ಕ್ಕೆ ಹೆಬ್ಬಾಳು ವಿರಕ್ತಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ, ಖಜೂರಿ ಕೋರಣೇಶ್ವರ ಮಠದ ಶ್ರೀಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ, ಗುರುಮಠಕಲ್ ಖಾಸಾಮಠದ ಶ್ರೀಶಾಂತವೀರ ಸ್ವಾಮೀಜಿ ಅವರ ಸಮ್ಮುಖದಲ್ಲಿ ತಾವು ನಡೆಸಿಕೊಡಲಿರುವ ಸಹಜ ಶಿವಯೋಗದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಂತೇಶ್ ಅಗಡಿ, ಬಸವರಾಜ್ ಮಾಳಗಿ, ಹರಿಹರ ಶಾಸಕ ಎಸ್.ರಾಮಪ್ಪ, ಸೋಮೇಶ್ವರ ವಿದ್ಯಾಲಯದ ಸುರೇಶ್, ಚೇತನ ಎಜುಕೇಷನ್ ಟ್ರಸ್ಟ್ನ ವಿ.ವಿಜಯಲಕ್ಷ್ಮಿ, ಕೆಎಸ್ಐಸಿ ಮಾಜಿ ಅಧ್ಯಕ್ಷ ಡಿ.ಬಸವರಾಜ್, ಸಾಯಿ ಕ್ರಿಯೇಷನ್ಸ್ನ ಶಿವಕುಮಾರ್.ಪಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಂದೇ ಬೆಳಿಗ್ಗೆ 11 ಗಂಟೆಗೆ ವಿದ್ಯಾರ್ಥಿಗಳೊಂದಿಗೆ ನಡೆಯುವ ಸಂವಾದದಲ್ಲಿ ಮುಖ್ಯ ಅತಿಥಿಗಳಾಗಿ ಡಿಡಿಪಿಐ ಸಿ.ಆರ್. ಪರ ಮೇಶ್ವರಪ್ಪ, ಬಿಇಒಗಳಾದ ಬಿ.ಸಿ.ಸಿದ್ದಪ್ಪ, ಎಸ್.ಉಷಾಕುಮಾರಿ ಭಾಗವಹಿಸುವರು. ಸಂಜೆ 6.30ಕ್ಕೆ ನಡೆಯಲಿರುವ ಸಾಧಕರ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವನ್ನು ಧಾರವಾಡ ಮುರುಘಾ ಮಠದ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ ವಹಿಸುವರು.
ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣನವರಿಗೆ ಜಯದೇವಶ್ರೀ, ಉದ್ಯಮಿ ಎಚ್.ಸಿ.ಪ್ರಭಾಕರ್ ಅವರಿಗೆ ಶೂನ್ಯಪೀಠ ಅಲ್ಲಮ, ಹೊಳಲ್ಕೆರೆ ವೈದ್ಯ ಡಾ.ನಾಗರಜ್ ಬಿ. ಸಜ್ಜನ್ ಅವರಿಗೆ ಶೂನ್ಯಪೀಠ ಚನ್ನಬಸವ ಹಾಗೂ ಬೀದರ್ನ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ಪದಾನ ಮಾಡಲಾಗುವುದು. ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ವಿನಯ್ಕುಮಾರ್ ಸೊರಕೆ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭಾಗವಹಿಸಲಿದ್ದಾರೆ.
ಕನ್ನಡ ಕೋಗಿಲೆ ಖ್ಯಾತಿಯ ಅರ್ಜುನ್ ಇಟಗಿ, ಮಹನ್ಯ ಗುರುಪಾಟೀಲ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ಜ.11ರಂದು ಬೆಳಿಗ್ಗೆ 7.30ಕ್ಕೆ ನಡೆಯುವ ಸಹಜ ಶಿವಯೋಗದ ಸಮ್ಮುಖವನ್ನು ಶ್ರೀಮೋಕ್ಷಪತಿ ಸ್ವಾಮೀಜಿ, ಶ್ರೀಜಯದೇವ ಸ್ವಾಮೀಜಿ, ಶ್ರೀಬಸವ ಮಹಾಂತ ಸ್ವಾಮೀಜಿ, ಶ್ರೀಸಿದ್ಧಬಸವ ಕಬೀರ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಪಾಲಿಕೆ ಸದಸ್ಯರುಗಳಾದ ಬಿ.ಜೆ.ಅಜಯ್ ಕುಮಾರ್, ಎ.ನಾಗರಾಜ್, ಕೆಎಸ್ಎಸ್ ಸಂಸ್ಥೆಯ ಎಚ್.ಕೆ.ಬಸವರಾಜು, ಬಿ.ಎಚ್.ವೀರಭದ್ರಪ್ಪ, ಜಸ್ಟಿನ್ ಡಿ’ಸೌಜಾ, ಕೆ.ಎನ್.ಓಂಕಾರಪ್ಪ, ಬಾಡದ ಆನಂದರಾಜ್, ಮೇದಾರ ಚಂದ್ರಣ್ಣ, ಎಂ.ಟಿ.ಸುಭಾಷ್, ವೀರಭದ್ರಪ್ಪ ದೇವಿಗೆರೆ ಭಾಗವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ತೋಟಪ್ಪ ಉತ್ತಂಗಿ ಮತ್ತು ಸಂಗಡಿಗರು ವಚನ ಗೀತೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಹೇಳಿದರು.
ಬೆಳಿಗ್ಗೆ 10 ಗಂಟೆಗೆ ನಡೆಯುವ ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸೆ ಶಿಬಿರದ ಸಮ್ಮುಖವನ್ನು ಮಾತೆ ಚಿನ್ಮಯಾ ದೇವಿ ವಹಿಸುವರು. ಕಂಚಿಕೆರೆ ಸುಶೀಲಮ್ಮ, ಐನಳ್ಳಿ ವಸಂತಕುಮಾರಿ ಉಪಸ್ಥಿತರಿರಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಯೋಗಾಸನ ಸ್ಪರ್ಧೆ ನೆರವೇರಲಿದೆ. 11 ಗಂಟೆಗೆ ನಡೆಯುವ ದೇವದಾಸಿ ಮಹಿಳೆಯರ ಜಾಗೃತಿ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್.ವಿಜಯಕುಮಾರ್, ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿ ಜೆ.ಮೋಕ್ಷಪತಿ ಉಪಸ್ಥಿತರಿರಲಿದ್ದಾರೆ ಎಂದರು.
ಅಂದೇ ಸಂಜೆ 6.30ಕ್ಕೆ ನಡೆಯುವ ಮಹಿಳಾ ಸಮಾವೇಶದ ಸಾನಿಧ್ಯವನ್ನು ಮಣಕವಾಡದ ಶ್ರೀಅಭಿನವ ಮೃತ್ಯುಂಜಯ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಪೊಲೀಸ್ ಆಯುಕ್ತ ಎಸ್.ಕೆ.ಭಾಸ್ಕರರಾವ್, ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ, ನಿವೃತ್ತ ನ್ಯಾಯಮೂರ್ತಿ ಬಿಲ್ಲಪ್ಪ, ಚಿಂತಕಿ ಲೀಲಾ ಮಲ್ಲಿಕಾರ್ಜುನ್ ಕಾರಟಗಿ, ಜಿ.ಪಂ. ಅಧ್ಯಕ್ಷೆರ ಯಶೋದಮ್ಮ ಮರುಳಪ್ಪ ಭಾಗವಹಿಸಲಿದ್ದಾರೆ. ಪಾಪಾಪಾಂಡು ಖ್ಯಾತಿಯ ಚಿದಾನಂದ, ಕನ್ನಡ ಕೋಗಿಲೆ ಪ್ರಶಸ್ತಿ ವಿಜೇತರಾದ ಖಾಸೀಮ್, ನೀತು ಸುಬ್ರಹ್ಮಣ್ಯ ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರತಿಭಾವಂತಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶ್ರೀಜಯದೇವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ವಿವರಿಸಿದರು.ಜ.12ರಂದು ಬೆಳಿಗ್ಗೆ 7.30ಕ್ಕೆ ನಡೆಯುವ ಸಹಜ ಶಿವಯೋದ ಸಮ್ಮುಖವನ್ನು ಶ್ರೀಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀಸಿದ್ದೇಶ್ವರ ಸ್ವಾಮೀಜಿ, ಶ್ರೀಬಸವ ಮಾಚಿದೇವ ಸ್ವಾಮೀಜಿ, ಶ್ರೀಶಿವಬಸವ ಸ್ವಾಮೀಜಿ, ಡಾ.ಬಸವಕುಮಾರ ಸ್ವಾಮೀಜಿ ಸಮ್ಮುಖ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ವಿ.ರಾಮಚಂದ್ರಪ್ಪ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಕೆ.ರಾಮಚಂದ್ರಪ್ಪ, ಪಾಲಿಕೆ ಮಾಜಿ ಸದಸ್ಯ ಎಚ್.ಜಿ.ಉಮೇಶ್, ಚಿಗಟೇರಿ ಜಯಪ್ರಕಾಶ್, ಶಶಿಧರ್ ಬಸಾಪುರ, ಪರಶುರಾಮ್ ಗದ್ವಾಲ್ ಭಾಗವಹಿಸುವರು. 9.45ಕ್ಕೆ ನಡೆಯುವ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣೆ ಕಾರ್ಯಕ್ರಮದಲ್ಲಿ ವೈದ್ಯ ಡಾ.ಎಸ್.ಎಂ.ಎಲಿ, ಕೀಲು ಮೂಳೆ ತಜ್ಞ ಡಾ.ಜಿ.ಸಿ.ಬಸವರಾಜ್ ಉಪಸ್ಥಿತರಿರಲಿದ್ದಾರೆ.
ಬೆಳಿಗ್ಗೆ 10.30ಕ್ಕೆ ನಗರದ ರೋಟರಿ ಬಾಲ ಭವನದಲ್ಲಿ ನಡೆಯುವ ಶ್ರೀಜಯದೇವ ಟ್ರೋಫಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯನ್ನು ಉದ್ಯಮಿ ಅಥಣಿ ವೀರಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ಚೆಸ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಉದ್ಯಮಿ ಅಣಬೇರು ರಾಜಣ್ಣ, ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್, ಲೆಕ್ಕ ಪರಿಶೋಧಕ ಉಮೇಶ್, ಯುವರಾಜ್ ಭಾಗವಹಿಸಲಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು.
ಸಂಜೆ 6.30ಕ್ಕೆ ಅನುಭವ ಮಂಟಪ ಮತ್ತು ಪೌರತ್ವ ಕಾಯಿದೆ-ಒಂದು ಮಾಹಿತಿ ಸಭೆ ವಿಷಯ ಕುರಿತ ಚಿಂತನಾ ಸಮಾವೇಶದ ಸಾನಿಧ್ಯವನ್ನು ಕಾಗಿನೆಲೆ ಕನಕಗುರು ಪೀಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಆಯನೂರು ಮಂಜುನಾಥ್, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ವಕೀಲ ಪ್ರೊ.ರವಿವರ್ಮ ಕುಮಾರ್, ಸಾಹಿತಿ ರಂಜಾನ್ ದರ್ಗಾ, ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಬಿ.ವಿ.ವಸಂತಕುಮಾರ್ ಭಾಗವಹಿಸಲಿದ್ದಾರೆ. ನಗೆ ಭಾಷಣಕಾರ ವೈಜನಾಥ ಸಜ್ಜನಶೆಟ್ಟಿ ಸಾಂಸ್ಕೃತಿಕ ಸಂಭ್ರಮ ನಡೆಸಿಕೊಡಲಿದ್ದಾರೆ. ಈ ಮೂರು ದಿನದ ವೈಚಾರಿಕ ಹಬ್ಬದಲ್ಲಿ ಮಠದ ಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.ಸುದ್ದಿಗೋಷ್ಠಿಯಲ್ಲಿ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಎಂ.ಜಯಕುಮಾರ್, ಓಂಕಾರಪ್ಪ, ಪಲ್ಲಾಘಟ್ಟೆ ಚನ್ನಬಸಪ್ಪ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
