ರಾಜಸ್ಥಾನ:
ಮತ್ತು ಖಾಸಗಿ ಬಸ್ ಮತ್ತು ವ್ಯಾನ್ ನಡುವೆ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ತಾನದ ಚುರು ಜಿಲ್ಲೆಯ ರತ್ನಘರ್ ಎಂಬಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಬಸ್ ಬಿಕನೇರ್ನತ್ತ ಹೋಗುತ್ತಿದ್ದಾಗ ರಾಜಾಲ್ ದೆಸರ್ ಮತ್ತು ಪರಸ್ನೋ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 11ರ ಲ್ಲಿ ಈ ಅವಘಡ ಸಂಭವಿಸಿದೆ. ಅತಿ ವೇಗ ಮತ್ತು ದಟ್ಟ ಮಂಜು ಆವರಿಸಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ