ನೆಲಮಂಗಲ:
ಇತ್ತೀಚೆಗಷ್ಟೇ ಭಜರಂಗಿ – 2 ಚಿತ್ರ ಚಿತ್ರೀಕರಣದ ವೇಳೆ ಸಿನಿಮಾ ಸೆಟ್ ಗೆ ಬೆಂಕಿ ತಗುಲಿ ಸುದ್ದಿಯಾಗಿದ್ದ ಬೆನ್ನಲ್ಲೇ ಇಂದು ಅದೇ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ಸೊಂದು ಶನಿವಾರ ಬೆಳಗ್ಗೆ ಅಪಘಾತಕ್ಕೀಡಾಗಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರ ಬಳಿ ಬಸ್ಸು ಅಪಘಾತವಾಗಿದ್ದು, ಕಲಾವಿದರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಮಾರು 60ಕ್ಕೂ ಹೆಚ್ಚು ಕಲಾವಿದರಿದ್ದ ಬಸ್ಸು, ಮೋಹನ್ ಬಿಕೆರೆ ಸ್ಟುಡಿಯೋದತ್ತ ತೆರಳುತ್ತಿದ್ದಾಗ ಈ ವೇಳೆ ಮೊದಲು ಕಾರಿಗೆ ಢಿಕ್ಕಿಯಾಗಿ ಬಳಿಕ ರಸ್ತೆಯ ಪಕ್ಕದಲ್ಲಿದ್ದ ಹೆವಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಸ್ಸು ಮೇಲೆಯೇ ಬಿದ್ದಿದೆ ಎಂದು ತಿಳಿದು ಬಂದಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/Bhajarangi-222-800x445.jpg)