ಬೆಂಗಳೂರು :
ವಿಧಾನಪರಿಷತ್ ಅವಿರೋಧವಾಗಿ ಆಯ್ಕೆ ಆಗೋ ಕನಸು ಕಂಡಿದ್ದ ಡಿಸಿಎಂ ಲಕ್ಷ್ಮಣ ಸವದಿಗೆ ಹೊಸ ತಲೆನೋವು ಶುರುವಾಗಿದೆ.
ಕಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬುಧವಾರ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ ಲಕ್ಷ್ಮಣ್ ಸವದಿಗೆ ಇದೀಗ ಕಾಂಗ್ರೆಸ್-ಜೆಡಿಎಸ್ ಬಿಗ್ ಶಾಕ್ ನೀಡಿದೆ.
ಹೌದು, ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ ಫೆಬ್ರವರಿ 17 ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಕಣಕ್ಕಿಳಿದಿದ್ದಾರೆ. ಗುಪ್ತ ಮಾತದಾನ ಆಗಿರುವುದರಿಂದ 7 ರಿಂದ 8 ಶಾಸಕರು ಕ್ರಾಸ್ ವೋಟ್ ಮಾಡಿದರೆ ಸವದಿಗೆ ಸೋಲು ಖಚಿತ ಎನ್ನಲಾಗಿದೆ. ಹೀಗಾಗಿ ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆ ಆಗುವ ಕನಸು ಕಂಡಿದ್ದ ಲಕ್ಷ್ಮಣ್ ಸವದಿಗೆ ಹೊಸ ಸಂಕಷ್ಟ ಶುರುವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
