ತುಮಕೂರು :
ಮನೆಯ ಸಂಪಿ ನಲ್ಲಿ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ನಗರದ ಹನುಮಂತಪುರದ ಬೈಲ್ ಆಂಜನೇಯ ಸ್ವಾಮಿ ದೇವಾಲಯದ ಹತ್ತಿರ ನಡೆದಿದೆ.
ವಿಜಯೇಂದ್ರ ಎಂಬುವವರ 2 ವರ್ಷದ ಮಗು ಅರನಾ ಸಾವನ್ನಪ್ಪಿರುವ ದುರ್ದೈವಿ. ಮನೆಯ ಹೊರಗೆ ಆಟವಾಡುತ್ತಿದ್ದ ಅರನಾ ಮನೆಯ ಮುಂಭಾಗದಲ್ಲಿದ್ದ ಸಂಪ್ ಒಳಗೆ ಬಿದ್ದಿದೆ. ಮನೆಯ ಒಳಗೆ ಕೆಲಸ ಮಾಡುತ್ತಿದ್ದ ತಾಯಿ ಕಾವ್ಯ ಹೊರಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಎಚ್ಚೆತ್ತ ಸ್ಥಳೀಯರು ಮಗುವನ್ನು ನೀರಿನ ತೊಟ್ಟಿಯಿಂದ ತೆಗೆದು ದೇಹದಲ್ಲಿ ಸೇರಿದ್ದ ನೀರನ್ನು ಹೊರಗೆ ತೆಗೆಯಲು ಪ್ರಯತ್ನ ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಸಮಯ ಮೀರಿದ್ದರಿಂದ ಮಗು ಕೊನೆಯುಸಿರೆಳೆದಿದೆ.
ಮಗುವನ್ನು ಕಳೆದುಕೊಂಡ ಪೋಷಕರ ಹಾಗೂ ಸಂಬಂಧಿಗಳ ರೋದನ ಮುಗಿಲುಮುಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
