ಬೆಂಗಳೂರು
ವಿಧಾನಮಂಡಲದ ಅಧಿವೇಶನಕ್ಕೂ ಕೊರೊನಾ ವೈರಸ್ ಭೀತಿ ತಟ್ಟುವಂತಾಗಿದೆ. ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನವನ್ನು ಮೊಟಕುಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ತಿಂಗಳ 5 ರಿಂದ ಆರಂಭವಾಗಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನವನ್ನು ಈ ತಿಂಗಳ ಅಂತ್ಯದವರೆಗೆ ನಡೆಸಲು ಉದ್ದೇಶಿಸಲಾಗಿತ್ತಾದರೂ, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಒಂದು ವಾರ ಮುಂಚೆಯೇ ಮೊಟಕುಗೊಳಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ. ಬಜೆಟ್ ಮೇಲೆ ಇನ್ನೂ ಚರ್ಚೆ ಆರಂಭವಾಗಬೇಕಿರುವುದರಿಂದ ಇಂದಿನಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಿ, ವಾರಾಂತ್ಯದೊಳಗೆ ಬಜೆಟ್ಗೆ ಉಭಯ ಸದನಗಳಲ್ಲಿ ಅಂಗೀಕಾರ ಪಡೆದು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ದೇಶಿಸಿದ್ದಾರೆ.
ಈ ಬಗ್ಗೆ ಪ್ರತಿಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಸಚಿವರು, ಶಾಸಕರು ಮತ್ತು ಸಚಿವಾಲಯದ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಪತ್ರಕರ್ತರು, ಎಸಿ ನಡುವೆಯೆ ಕೆಲಸ ಮಾಡಬೇಕಾದಂತಹ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ವಿಧಾನ ಮಂಡಲದ ಉಭಯ ಸದನಗಳಲ್ಲಿ ದಿನವಿಡೀ ಹವಾನಿಯಂತ್ರಣಾ ಸೌಲಭ್ಯ ಹವಾನಿಯಂತ್ರಣ ವ್ಯವಸ್ಥೆ (ಎಸಿ) ಇರುವುದರಿಂದ ರೋಗಾಣು ಹರಡುವ ಸಾಧ್ಯತೆಗಳಿರುತ್ತವೆ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
