ನಗರದಲ್ಲಿ ಕೋರೋನಾ ಮುಂಜಾಗ್ರತೆ ಕ್ರಮವಾಗಿ ಭ್ಲೀಚಿಂಗ್ ಸಿಂಪಡನೆ

ಹಿರಿಯೂರು :

      ನಗರದಲ್ಲಿ ಕೋರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಾದ ಕೆ.ಎಸ್.ಆರ್.ಟಿ.ಸಿ ಬಸ್ ಸ್ಯ್ಟಾಂಡ್, ನೆಹರು ಮಾರ್ಕೆಟ್, ಆಸ್ಪತ್ರೆ ಸರ್ಕಲ್  ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳಿಗೆ ಭ್ಲೀಚಿಂಗ್ ಪೌಡರ್ ಸಿಂಪಡಿಸಲಾಯಿತು.

      ಈ ಕಾರ್ಯದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಗ್ನಿಶಾಮಕ ಇಲಾಖೆ  ಅಧಿಕಾರಿಗಳು ಹಾಗೂ ಸಿಬ್ಬಂದಿ, ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಹಾಗು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು  ಒಗ್ಗಟ್ಟಾಗಿ ಸೇರಿ ಸಾರ್ವಜನಿಕರ ಆರೋಗ್ಯ ಕಾಪಾಡಲು ಕಾರ್ಯ ನಿರ್ವಹಿಸಿದರು.

       ಇಂತಹ ತುರ್ತು ಸಂದರ್ಭದಲ್ಲಿ ಕರೋನ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮ ವಹಿಸುತ್ತಿರುವ ಎಲ್ಲ ಅಧಿಕಾರಿಗಳ ಸೇವೆ ತುಂಬಾ ಶ್ಲಾಘನೀಯ ಎಂಬುದಾಗಿ ಸಾರ್ವಜನಿಕರು ಪ್ರಶಂಸಿಸಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap