ಬೆಂಗಳೂರು :
ಎರಡು ಅಂತಸ್ತಿನ ಕಟ್ಟಡದ ಮೇಲಿಂದ ತಾತನ ಕೈ ಜಾರಿ ಬಿದ್ದು 6 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಾರುತಿ ನಗರದ ನಿವಾಸಿ ವಿನಯ್ ಹಾಗೂ ಪ್ರಿಯಾಂಕಾ ದಂಪತಿಯ ಆರು ತಿಂಗಳ ಹೆಣ್ಣು ಮಗು ಮೃತಪಟ್ಟ ಕಂದಮ್ಮ. ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವ ಟೆಕ್ಕಿ ದಂಪತಿ ಮನೆ ಕ್ಲೀನ್ ಮಾಡುವ ವೇಳೆ ಧೂಳು ಆವರಿಸಿ ಮಗುವಿಗೆ ಆರೋಗ್ಯದ ಸಮಸ್ಯೆಯಾಗುತ್ತದೆ ಎಂದು 70 ವರ್ಷದ ತಾತನ ಕೈಗೆ ಮಗು ಕೊಟ್ಟಿದ್ದಾರೆ.
ಮಗುವನ್ನು ಎರಡನೇ ಅಂತಸ್ತಿಗೆ ಎತ್ತಿಕೊಂಡು ಹೋಗುತ್ತಿದ್ದ ವೃದ್ಧ ಮೆಟ್ಟಿಲ ಬಳಿ ಕಾಲು ಜಾರಿ ಆಯತಪ್ಪಿದ್ದು ಕೈಯಿಂದ ಜಾರಿದ ಮಗು ಎರಡನೇ ಅಂತಸ್ತಿನಿಂದ ಕೆಳಗೆ ಬಿದ್ದಿದೆ. ಕೂಡಲೇ ದಂಪತಿ ಮಗುವನ್ನು ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಐಸಿಯುವಿಲ್ಲದ ಕಾರಣ ಬೇರೊಂದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ