ಪಾಟ್ನಾ:
ರಾಷ್ಟ್ರ ರಾಜಧಾನಿ ದೆಹಲಿಯಯಲ್ಲಿ ನಡೆದ ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ 46 ಜನರನ್ನು ವೀಸಾ ಉಲ್ಲಂಘನೆ ಆರೋಪದ ಮೇಲೆ ಜೈಲಿಗೆ ಕಳುಹಿಸಲಾಗಿದೆ.
ಬಂಧಿತರು ಪ್ರವಾಸಿ ವೀಸಾ ಪಡೆದು ನವದೆಹಲಿಯ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಬಿಹಾರ್ ಗೆ ಆಗಮಿಸಿದ್ದರು. ಇವರ ವಿರುದ್ಧ 1946ರ ವಿದೇಶಿ ಕಾಯ್ದೆ ಸೆಕ್ಷನ್ 14ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಅವರನ್ನೆಲ್ಲಾ ಜೈಲಿಗೆ ಕಳುಹಿಸಲಾಗಿದೆ.
ಮಲೇಶಿಯಾದ 20 ಮಂದಿ ಸೇರಿದಂತೆ ಕಿರ್ಗಿಸ್ತಾನ್, ಬಾಂಗ್ಲಾದೇಶ ಮತ್ತು ಇಂಡೋನೇಷಿಯಾದ ಪ್ರಜೆಗಳ ವಿರುದ್ಧ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Tabligi-jamaat.gif)