ಬೆಂಗಳೂರು
ಕೆಲ ದಿನಗಳ ಹಿಂದೆ ಪಾದರಾಯನಪುರದ ಪುಂಡರನ್ನು ರಾಮನಗರ ಜೈಲಿಗೆ ಕಳುಹಿಸಿ ನಂತರ ಸೋಂಕಿನ ಶಂಕೆ ಹೆಚ್ಚಾಗಿದ್ದರಿಂದ ಬೆಂಗಳೂರಿಗೆ ವಾಪಸ್ ಕರೆಸಿಕೊಂಡದ್ದು ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಗ್ರೀನ್ ಝೋನ್ ನಲ್ಲಿರುವ ರಾಮನಗರಕ್ಕೆ ಪಾದರಾಯನ ಪುರದ ಕಿಡಿಗೇಡಿಗಳನ್ನು ಸ್ಥಳಾಂತರಿಸಿದ್ದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು ಅವರ ಈ ಆಕ್ರೋಶಕ್ಕೂ ಬೆಲೆಯಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.
“ಕುಮಾರಸ್ವಾಮಿಯವರ ಹೇಳಿಕೆ ಸರಿಯಾಗಿಯೇ ಇದೆ” ಎಂದು ಸಚಿವರು ಹೇಳುವ ಮೂಲಕ, ಸರಕಾರಕ್ಕೆ ಮುಜುಗರ ತಂದಿದ್ದಾರೆ.“ರಾಮನಗರ ಜಿಲ್ಲೆಗೆ ಆರೋಪಿಗಳನ್ನು ಸ್ಥಳಾಂತರಿಸಿದರೆ ಅಲ್ಲಿಗೂ ಸೋಂಕು ಹರಡಬಹುದು ಎನ್ನುವುದು ಕುಮಾರಸ್ವಾಮಿಯವರ ನಿಲುವಾಗಿದೆ. ರಾಮನಗರ ಗ್ರೀನ್ ಝೋನ್ ನಲ್ಲಿದೆ”.
