ಚಿತ್ರದುರ್ಗ : ಭಾರಿ ಸಿಡಿಲು, ಮಳೆಗೆ ಇಬ್ಬರ ಸಾವು!!

ಚಿತ್ರದುರ್ಗ :

       ನಿನ್ನೆ ಭಾರಿ ಗಾಳಿ, ಮಳೆಯಿಂದಾಗಿ ಇಬ್ಬರು ವ್ಯಕ್ತಿಗಳೂ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ.

       ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದ ಹೊಲದಲ್ಲಿ ತೆಂಗಿನ ಮರದ ಕೆಳಗೆ ಕುಳಿತಿರುವಾಗ ಮರಕ್ಕೆ ಸಿಡಿಲು ಬಡಿದು ಗೀತಮ್ಮ (45) ಎಂಬುವರು ಮೃತಪಟ್ಟಿದ್ದಾರೆ. ಇನ್ನು ಶ್ರೀರಾಂಪುರ ಹೋಬಳಿಯ ಆಲ್ಗಟ್ಟ ಗ್ರಾಮದ ರೇಣುಕಾರಾದ್ಯ (35) ಎಂಬ ರೈತನ ಮೇಲೆ ತೆಂಗಿನ ಮರವೊಂದು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

      ಇದೇ ತಾಲ್ಲೂಕಿನ ಮಾಡದಕೆರೆ ಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಸುರಿದ ಗಾಳಿ ಮಳೆಗೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ನೀರು ಕುಡಿಯಲು ಹೋದ ಎರಡು ಎಮ್ಮೆಗಳು ಸಾವಿಗೀಡಾಗಿವೆ.

       ವಿಷಯ ತಿಳಿದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಪೊಲೀಸರು ಮತ್ತು ತಹಶೀಲ್ದಾರ್ ತಿಪ್ಪೇಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap