ಕೊರಟಗೆರೆ:
ಅನಾಯಿಕ ದೂರವಾಣಿ ಕರೆಯ ಮಾತಿಗೆ ಮರುಳಾಗಿ ಲಕ್ಷಾಂತರ ರೂ. ಮೋಸಹೋದ ನಂತರ ಹಣಕಾಸಿನ ಸಮಸ್ಯೆಯಿಂದ ಮನನೊಂದ ಕೋಡ್ಲಹಳ್ಳಿ ಗ್ರಾಮದ ಯುವಕನೋರ್ವ ಮಾವತ್ತೂರು ಕೆರೆಯ ಸಮೀಪದ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಗುರುವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ತಾಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕೋಡ್ಲಹಳ್ಳಿ ಗ್ರಾಮದ ವಾಸಿಯಾದ ನಂದೀಶಯ್ಯನ ಮಗನಾದ ಮಧುಶಂಕರ್(25) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಸಾಯುವ ಮುಂಚೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೀರುವ ಸ್ಥಳದ ವಿಡಿಯೋ ಮಾಡಿ ತನ್ನ ಅಣ್ಣನಿಗೆ ಕಳಿಸಿದ್ದಾನೆ.
ಬೆಂಗಳೂರು ನಗರದಲ್ಲಿ ಕಳೆದ 8ವರ್ಷದಿಂದ ಕಾರು ಚಾಲಕನಾಗಿದ್ದ ಮಧುಶಂಕರ್ ಕೊರೊನಾ ಲಾಕ್ಡೌನ್ ಹಿನ್ನಲೆಯಲ್ಲಿ ಕಳೆದ ವಾರವಷ್ಟೆ ತನ್ನ ಸ್ವಗ್ರಾಮ ಕೋಡ್ಲಹಳ್ಳಿಗೆ ಆಗಮಿಸಿದ್ದಾನೆ. ಹಣಕಾಸಿನ ಸಮಸ್ಯೆಯಿಂದ ಮಾವತ್ತೂರು ಕೆರೆ ಸಮೀಪದ ಹುಣಸೆ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ.
ಮೃತ ಮಧುಶಂಕರ್ ತನ್ನ ದೊಡ್ಡಪ್ಪನ ಮಗ ಮತ್ತು ಆತ್ಮೀಯ ಸ್ನೇಹಿತನಿಗೆ ಸಾಯುವ ಮುನ್ನ ನಾನು ಸಾಯುತ್ತೀದ್ದೇನೆ ಎಂಬ ಕೊನೆಯ ವಿಡಿಯೋ ಮಾಡಿ ತನ್ನ ಅಣ್ಣ ಮತ್ತು ಆತ್ಮೀಯ ಸ್ನೇಹಿತನಿಗೆ ಶೇರ್ ಮಾಡಿದ ಮೇಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಳಾಲ ಪಿಎಸೈ ನವೀನಕುಮಾರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
