ಜಗಳೂರು:
ಜಗಳೂರಿಗೆ 10 ಕೋಟಿ ಮಂಜೂರಾಗಿದ್ದು, ರೈತರನ್ನು ಅಲೆದಾಡಿಸದೇ ಅರ್ಹ ರೈತ ಫಲಾನುಭವಿಗಳನ್ನು ಹುಡುಕಿ ಸಹಕಾರ ಸಂಘಗಳ ಕಾರ್ಯದರ್ಶಿಗಳು ಸಾಲ ಕೊಡಬೇಕು, ಬೇನಾಮಿ ವ್ಯಕ್ತಿಗಳಿಗೆ ಹಣ ಕೊಟ್ಟರೆ ನೀವೇ ಹೊಣೆಗಾರರಾಗಬೇಕಾಗುತ್ತದೆ ಎಂದು ಶಾಸಕ ಎಸ್.ವಿ ರಾಮಚಂದ್ರ ಕಾರ್ಯದರ್ಶಿಗಳಿಗೆ ಎಚ್ಚರಿಕೆ ನೀಡಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಸ್ಯಾನಿಟೇಜರ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು.
ಸಹಕಾರ ಸಂಘಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿರುವ ಬಗ್ಗೆ ಗಂಬೀರ ಆರೋಪಗಳಿವೆ. ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಬಂದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಹಕಾರ ಸಂಘಗಳು ಮೂಲಕ ಸಾಲಸೌಲಭ್ಯ ನೀಡಿವೆ. ಸಬ್ಸಿಡಿ ದರದಲ್ಲಿ ಬೀಜ, ಗೊಬ್ಬರ ನೀಡಲಾಗುತ್ತಿದೆ. ತೋಟಗಾರಿಕೆ ಇಲಾಖೆಯಿಂದ ನಷ್ಟ ಅನುಭವಿಸಿದ ಹೂ ಬೆಳೆಗಾರರಿಗೆ 25 ಸಾವಿರ, ಟಮೋಟಾ ಸೇರಿದಂತೆ ಇತರೆ ಬೆಳೆದ ಪರಿಹಾರ ಹಣ ನೀಡಲಾಗುತ್ತಿದೆ ರೈತರು ಇದರ ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಸಣ್ಣದಾಗಿ ಹೈನುಗಾರಿಕೆ ಮಾಡುವವರಿಗೆ ಹಾಲು ಸಂಗ್ರಹಣ ಕೇಂದ್ರ ತೆರದರೆ ಶಾಸಕರ ಅನುದಾನದಲ್ಲಿ 3 ಲಕ್ಷ ಹಣ ನೀಡುವುದಾಗಿ ಹಣ ಕೊಡುವುದಾಗಿ ಶಾಸಕರು ಭರವಸೆ ನೀಡಿದರು. ಕರೋನಾ ವೈರಾಣುವಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ, ಭಾರತ ದೇಶ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ ಆದರೂ ಇದರ ಹೊಡೆತದಿಂದ ಅಭಿವೃದ್ದಿಯಲ್ಲಿ ಎರಡು ವರ್ಷಗಳ ಹಿಂದಕ್ಕೆ ಹೋದಂತಾಗಿದೆ. ಆದ್ದರಿಂದ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವೈರಾಣು ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ನಿರ್ದೇಶಕರ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ಕರೋನಾ ಹಿನ್ನೆಲೆ ಸಹಕಾರ ಸಂಘದಿಂದ ದೇಣಿಗೆ ಸಂಗ್ರಹಿಸಿ 1ಕೋಟಿ ಹಣವನ್ನು ಸಿ.ಎಂ ಪರಿಹಾರ ನಿದಿಗೆ ನೀಡಲಾಗಿದೆ ಎಂದರು. ಇದೇ ವೇಳೇ ಸಹಕಾರ ಸಂಘದ ಸಿಬ್ಬಂದಿಗಳಿಗೆ ಸ್ಯಾನಿಟೇಜರ್ ಮತ್ತು ಮಾಸ್ಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ, ಡಿಡಿಸಿಸಿ ಬ್ಯಾಂಕಿನ ನಿರ್ದೇಶಕ ಸೂರಡ್ಡಿಹಳ್ಳಿ ಶರಣಪ್ಪ, ಜಿ.ಪಂ ಸದಸ್ಯ ಎಸ್.ಕೆ ಮಂಜುನಾಥ, ತಾ.ಪಂ ಸದಸ್ಯ ಸಿದ್ದೇಶ್, ಬಿಜೆಪಿ ಅಧ್ಯಕ್ಷ ಎಚ್.ಸಿ ಮಹೇಶ, ಕೃಷಿ ಸಹಾಯಕ ನಿರ್ದೇಶಕ ಲೋಕೇಶ್, ತೋಟಗಾರಿಕೆ ಸಹಾಯಕ ನಿರ್ದೇಶಕ ವೆಂಕಟೇಶ್ ಮೂರ್ತಿ, ಹಾಲಸ್ವಾಮಿ, ಮುಖಂಡ ಬಿಸ್ತುವಳ್ಳಿ ಬಾಬು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
