ಬೆಳ್ತಂಗಡಿ :
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ವಿ. ಶೆಟ್ಟಿ ತಿಳಿಸಿದ್ದಾರೆ.
ಲಾಕ್ಡೌನ್ನಿಂದ ಧಾರ್ಮಿಕ ಕೇಂದ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಅದರಂತೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಯೂ ಪ್ರವೇಶವನ್ನು ಬಂದ್ ಮಾಡಲಾಗಿತ್ತು. ಇದೀಗ ಮುಜರಾಯಿ ಇಲಾಖೆಯು ಜೂನ್ 1ರಿಂದ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದೆ.
ದೇವಾಲಯಗಳನ್ನು ತೆರೆಯಲು ಮಾರ್ಚ್ 31ರ ವೇಳೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸಭೆ, ಜಾತ್ರೆ ಹಾಗೂ ದೇವರ ಉತ್ಸವಗಳನ್ನು ನಡೆಸಲು ಅನುಮತಿ ಇಲ್ಲ. ನಾಳೆಯಿಂದ ಆಯ್ದ 52 ದೇವಸ್ಥಾನಗಳಲ್ಲಿ ಆನ್ಲೈನ್ ಮೂಲಕ ದೇವರ ಸೇವೆಗಳ ಕಾರ್ಯಗಳ ಬುಕಿಂಗ್ ಆರಂಭ ಮಾಡಲಾಗುತ್ತದೆ.
ಮೈಸೂರು ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮುಕಾಂಭಿಕಾ, ಧರ್ಮಸ್ಥಳ ಸೇರಿದಂತೆ ಪ್ರಮುಖ 52 ದೇವಾಲಯಗಳು ಜೂನ್ 1ರಿಂದ ತೆರೆಯಲಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Dharmasthala.gif)