ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಸ್ತುವಾರಿ!!

ಬೆಂಗಳೂರು:

      ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ರಮೇಶ್ ಜಾರಕಿಹೊಳಿಗೆ ಕೊನೆಗೂ ಬೆಳಗಾವಿ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ. 

     ಬೆಳಗಾವಿ ಉಸ್ತುವಾರಿ ಸ್ಥಾನದ ಮೇಲೆ ಈ ಮೊದಲು ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಲಕ್ಷ್ಮಣ್ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಉಂಟಾಗಿದ್ದರಿಂದ ಬೆಳಗಾವಿಯನ್ನು ಇವರಿಗೆ ಕೊಡದೆ ಸಚಿವ ಜಗದೀಶ್ ಶೆಟ್ಟರ್ ಗೆ ಸಿಎಂ ವಹಿಸಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉಸ್ತುವಾರಿ ನೀಡಲಾಗಿದೆ.

      ಈ ಮೂಲಕ ಅಂದುಕೊಂಡ ಖಾತೆ ಜೊತೆಗೆ ತನ್ನ ಜಿಲ್ಲೆಯ ಉಸ್ತುವಾರಿಯನ್ನು ಪಡೆಯುವಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. 

     ಹಾಗೆಯೇ, ಆಹಾರ ಸಚಿವ ಕೆ ಗೋಪಾಲಯ್ಯಗೆ ಹಾಸನ ಉಸ್ತುವಾರಿ ನೀಡಲಾಗಿದೆ. ಈ ಮೊದಲು ಹಾಸನ ಸಚಿವ ಮಾಧುಸ್ವಾಮಿ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ಗೋಪಾಲಯ್ಯಗೆ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link