ಅನಂತನಾಗ್
ಉಗ್ರರು ಕಾಂಗ್ರೆಸ್ ಸರಪಂತ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಕ್ಕೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಂಜೆ ಉಗ್ರರು ಕೆಲಸ ನಿಮಿತ್ತ ಹೊರಹೋಗುತ್ತಿದ್ದ ಸರಪಂಚ್ ಅಜಯ್ ಪಂಡಿತ್ ಭಾರ್ತಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ಅಜಯ್ ಅವರು ತಮಗೆ ಭದ್ರತೆ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಬಿಜೆಪಿಗೆ ಸೇರದ ಕಾರಣ ಭದ್ರತೆಯನ್ನು ನೀಡಲಾಗಿಲ್ಲ ಎಂದು ಆರೋಪಿಸಿದೆ.
ಇದೀಗ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಅಜಯ್ ಪಂಡಿತ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಅಜಯ್ ಅವರು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದುಃಖದ ಈ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಹಿಂಸೆ ಎಂದಿಗೂ ಗೆಲ್ಲುವುದಿಲ್ಲ ಎಂದು ಬರೆದಿದ್ದಾರೆ.
ಅಜಯ್ ಪಂಡಿತ್ ಅವರು ತನ್ನ ತೋಟದಲ್ಲಿ ಕೆಲಸ ಮಾಡಲು ಹೋಗುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
![](https://prajapragathi.com/wp-content/uploads/2020/06/DSC_9545.gif)