ಬೆಂಗಳೂರು : ಕೊರೊನಾ ಭೀತಿ ; ಪೊಲೀಸ್ ಆತ್ಮಹತ್ಯೆಗೆ ಶರಣು!!

ಬೆಂಗಳೂರು :

     ಕೊರೊನಾ ಸೋಂಕಿಗೆ ಹೆದರಿ ಪೊಲೀಸ್​ ಕಾನ್ಸ್​ಟೇಬಲ್​ ಓರ್ವರು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

       50 ವರ್ಷದ ಕೆಎಸ್​ಆರ್​ಪಿ ಹೆಡ್​ ಕಾನ್ಸ್​​ಟೇಬಲ್​​ ಆತ್ಮಹತ್ಯೆಗೆ ಶರಣಾದವರು. ಸೋಂಕಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೇ ತಿಂಗಳ 20ರಂದು ಅವರಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು.

      ಸೋಮವಾರ ಸಂಜೆ ವೈದ್ಯಕೀಯ ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಕಮಾಡೆಂಟ್​ ಸೂಚಿಸಿದ್ದರು.

      ಹೀಗಾಗಿ, ರಾತ್ರಿ ಸೋಂಕಿತ ಪೇದೆಯನ್ನು ಕೋರಮಂಗಲದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು. ವ್ಯಾನ್ ನಲ್ಲಿ ಸೋಂಕಿತ ಪೇದೆ ಹಿಂದೆ ಕುಳಿತಿದ್ದರೇ, ಮತ್ತೋರ್ವರು ವಾಹನ ಚಾಲನೆ ಮಾಡುತ್ತಿದ್ದರು.

         ವ್ಯಾನ್ ಹಿಂಬದಿ ಕೂಳಿತರೆ ಯಾರಿಗೂ ಸಹ ಗೊತ್ತಾಗುವುದಿಲ್ಲ ಎಂದು ಸೋಂಕಿತ ಪೇದೆ ತಾವು ಉಟ್ಟಿದ್ದ ಪಂಚೆಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವ್ಯಾನ್ ವಿಕ್ಟೋರಿಯಾ ಆಸ್ಪತ್ರೆ ಬಳಿ ತಲುಪಿದಾಗ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

      ರಾತ್ರಿ ಸುಮಾರು10 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಸಿಲಿಕಾನ್ ಸಿಟಿಯ ಇಬ್ಬರೂ ಎಎಸ್ ಐ ಹಾಗೂ ಓರ್ವ ಹೆಡ್ ಕಾನ್ಸ್ ಟೇಬಲ್ ಸೋಂಕಿಗೆ ಬಲಿಯಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link