ಮಂಗಳೂರು:
ಕೊರೊನಾ ಭೀತಿ ಮಧ್ಯೆ ಅಂಗವೈಕಲ್ಯತೆಗೆ ಸೆಡ್ಡುಹೊಡೆದು ಬಂಟ್ವಾಳ ತಾಲೂಕಿನ ವಿದ್ಯಾರ್ಥಿ SSLC ಪರೀಕ್ಷೆ ಬರೆದಿದ್ದಾನೆ.
ಬಂಟ್ವಾಳದ ಕೌಶಿಕ್ ಆಚಾರ್ಯ ಎಂಬ ವಿದ್ಯಾರ್ಥಿ ಎಸ್ವಿಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನ ಯಾರ ನೆರವೂ ಇಲ್ಲದೇ, ನೆಲದ ಮೇಲೆ ಕುಳಿತು ಬರೆದಿದ್ದಾನೆ. ಕೌಶಿಕ್ ಹೀಗೆ ಪರೀಕ್ಷೆ ಬರೆದಿದ್ದು ಈಗ ಶಿಕ್ಷಣ ಸಚಿವರ ಗಮನ ಸೆಳೆದಿದೆ.
ಬಂಟ್ವಾಳ ತಾಲ್ಲೂಕಿನ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೇ ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಈ ಪೋರ ಕೌಶಿಕ್ ನಿಗೆ ನನ್ನ ಹೃದಯಪೂರ್ವ ಮೆಚ್ಚುಗೆ. ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸುತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ. pic.twitter.com/oLV8Ef0RN8
— S.Suresh Kumar, Minister – Govt of Karnataka (@nimmasuresh) June 26, 2020
ವಿದ್ಯಾರ್ಥಿಯ ಆತ್ಮವಿಶ್ವಾಸ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಯಾರ ಸಹಾಯವೂ ಇಲ್ಲದೇ ಪರೀಕ್ಷೆ ಬರೆದ ಈತನಿಗೆ ಹೃದಯಪೂರ್ವಕ ಮೆಚ್ಚುಗೆ. ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸುತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ ಎಂದು ಶ್ಲಾಘಿಸಿದ್ದಾರೆ.
ಮನಸ್ಸಿದ್ದರೆ ಮಾರ್ಗ ಅಂತಾ ಹೇಳೋರು ಸಾಕಷ್ಟು ಮಂದಿ. ಆದ್ರೆ ಈ ಮಾತನ್ನ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ ಮಾಡಿತೋರಿಸುತ್ತಿದ್ದಾನೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ