ಕೊರೋನಾ ತುರ್ತು ಸಂಬರ್ಭಕ್ಕಾಗಿ ಸಹಾಯವಾಣಿ: ಸುಧಾಕರ್

ಚಿಕ್ಕಬಳ್ಳಾಪುರ

     ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಹಕಾರಿಯಾಗುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಿಗೂ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ ವಿತರಿಸಲಾಗಿದೆ. ಅಲ್ಲದೆ, ಹಾಸಿಗೆ ಹಂಚಿಕೆಗೂ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವ ಕೆ, ಸುಧಾಕರ್‌ ತಿಳಿಸಿದ್ದಾರೆ.

     ಇಂದು ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾಹಿತಿ ನೀಡಿರುವ ಸಚಿವ ಸುಧಾಕರ್‌, “ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಅವಶ್ಯಕತೆ ಇರುವ ಕ್ಲಸ್ಟರ್ ಗಳನ್ನು ಗುರುತಿಸುವುದು ಮತ್ತು ರೋಗಿಗಳನ್ನು ದಾಖಲಿಸಿಕೊಳ್ಳಲು ಇರುವ ಗೊಂದಲ ನಿವಾರಿಸಲು ಆಸ್ಪತ್ರೆಗಳಲ್ಲಿ ಆಂಟಿಜೆನ್ ಟೆಸ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಕೊರೋನಾ ರೋಗಿಗಳಿಗೆ ಹಾಸಿಗೆ ಸೀಮಿತಗೊಳಿಸಿದ್ದು, ಇದನ್ನು ಹಂಚಲು ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು” ಎಂದು ತಿಳಿಸಿದ್ದಾರೆ. “ಇದರ ಜೊತೆಗೆ ರೋಗಲಕ್ಷಣವಿರುವ ಸೋಂಕಿತರ ಪತ್ತೆಗಾಗಿ, ರೋಗಲಕ್ಷಣವಿದ್ದವರಿಗೆ ಆಸ್ಪತ್ರೆ, ಅಂಬುಲನ್ಸ್ ಸಂಯೋಜನೆಗಾಗಿ ಮತ್ತು ಇತರೆ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸಾಹಾಯವಾಣಿ ಕಲ್ಪಿಸಲಾಗುವುದು.

     RT-PCR ಪರೀಕ್ಷೆಯ ಸ್ಯಾಂಪಲ್ ಗಳನ್ನು ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ವರದಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಆಂಬ್ಯುಲೆನ್ಸ್ ಲಭ್ಯತೆ ಹೆಚ್ಚಿಸುವುದು, ರಾಪಿಡ್ ಆಂಟಿಜೆನ್ ಟೆಸ್ಟ್ ಗಾಗಿ ಮೊಬೈಲ್ ಟೆಸ್ಟಿಂಗ್ ವಾಹನ ಸಜ್ಜುಗೊಳಿಸಲಾಗುವುದು” ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link