ಅಹಮದಾಬಾದ್ :
ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮಂದಿ ಕರೋನಾ ರೋಗಿಗಳು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.
ನವರಂಗ್ ಪುರದಲ್ಲಿರುವ ಶ್ರೀ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಅವರು ಅಹಮದಾಬಾದ್ನ ನವರಂಗಪುರ ಪ್ರದೇಶದ ನಿಗಧಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಸುಮಾರು 40 ಕೋವಿಡ್-19 ರೋಗಿಗಳನ್ನು ರಕ್ಷಿಸಲಾಗಿದ್ದು, ಅವರನ್ನು ನಗರದ ನಾಗರಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.
CM Vijay Rupani has ordered a probe in the incident of fire at Shrey Hospital in Ahmedabad. Sangeeta Singh, Additional Chief Secretary (Home Department) will be leading the probe. The CM has ordered for a report within 3 days: Gujarat Chief Minister's Office (CMO) (file pic) pic.twitter.com/RLOfthZ4yR
— ANI (@ANI) August 6, 2020
ಅಹಮದಾಬಾದ್ನ ಶ್ರೀ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಬಂಧ ಸಿಎಂ ವಿಜಯ್ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ಇಲಾಖೆ) ಸಂಗೀತ ಸಿಂಗ್ ನೇತೃತ್ವದಲ್ಲಿ ತನಿಖೆಗೆ ನಡೆಯಲಿದ್ದು, 3 ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಹಮದಾಬಾದ್ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಬೇಸರವಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಮಾತನಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/Covid-hospital-fire.jpg)