ಬೆಂಗಳೂರು
ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ರಾಜಕೀಯ ಹುನ್ನಾರ ಅಡಕವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಆಗಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಮಾಹಿತಿಯನ್ನು ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಭಿನ್ನಾಭಿಪ್ರಾಯ, ಹಿಂದಿನ ಚುನಾವಣೆ ವಿಚಾರ ಹಾಗೂ ಮುಂಬರಲಿರುವ ಚುನಾವಣೆ ವಿಚಾರ ಈ ಗಲಾಟೆಯಲ್ಲಿ ಸೇರಿಕೊಂಡಿದೆ ಎಂಬುದು ಇಲ್ಲಿಯವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ.
ಅಲ್ಲದೇ, ಕಾಂಗ್ರೆಸ್ ನ ಕೀಳು ರಾಜಕಾರಣ ಮುಂದುವರೆದಿದ್ದು, ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯವೂ ಕೂಡ ಗಲಭೆಗೆ ಕಾರಣವಾಗಿದೆ. ಇನ್ನು ಕಾನೂನು ಸುವ್ಯವಸ್ಥೆ ಹದಗೆಡುವಲ್ಲಿ ಎಸ್ ಡಿ ಪಿಐ ಪಕ್ಷದ ಪಾತ್ರವೇನು ಎಂಬುದರ ಕುರಿತಾಗಿಯೂ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.ಕಾರ್ಪೊರೇಟ್ ಗಳನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದ್ದು, ಗಲಭೆಕೋರರ ಹಿನ್ನಲೆಯಲ್ಲಿ ಯನ್ನು ಸಹ ಪರಿಶೀಲಿಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/bommai-1.gif)