ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೇ ಕಾನೂನು ಕ್ರಮ: ಬೊಮ್ಮಾಯಿ

ಬೆಂಗಳೂರು

      ಡಿಜೆ ಹಳ್ಳಿ,ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

     ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​ ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಸೈಬರ್ ಕ್ರೈಂ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಸಾಮಾಜ ಸ್ವಾಸ್ಥ್ಯ ಕಾಪಾಡಲು ನಾವು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಆದ್ದರಿಂದ ನಾನು ಈ ಕುರಿತು ತಾಂತ್ರಿಕ ಎಕ್ಸ್​​ಪರ್ಟ್ಸ್​​ ಜೊತೆಯೂ ಚರ್ಚೆಯೂ ಮಾಡಿ ತೀರ್ಮಾನ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.

     ಈ ಸಂದರ್ಭದಲ್ಲಿ ಶಾಸಕರ ರಕ್ಷಣೆ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹಸಚಿವರು, ನಾವು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಸಂಪೂರ್ಣ ರಕ್ಷಣೆ ನೀಡಲಾಗುವುದು. ಈಗಾಗಲೇ ಈ ಕುರಿತು ತಾವು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದು, ಅವರ ಕುಟಂಬಕ್ಕೂ ಪೊಲೀಸ್ ಭದ್ರತೆ ಒದಗಿಸುತ್ತೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link