ಜನ ವಿರೋಧಿ ನೀತಿಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ :ಎಸ್.ಡಿ.ಪಾರ್ವತಮ್ಮ

ಮಧುಗಿರಿ

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ಸಿ.ಐ.ಟಿ.ಯು. ಘಟಕದ ವತಿಯಿಂದ ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

    ಸಿ.ಐ.ಟಿ.ಯುನ ಅಧ್ಯಕ್ಷೆ ಎಸ್.ಡಿ.ಪಾರ್ವತಮ್ಮ ಮಾತನಾಡಿ, ಜನತೆ ಒಂದು ಕಡೆ ಹಾಳಾಗುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಇನ್ನೊಂದು ಕೋವಿಡ್ – 19 ರ ಸಂಕಷ್ಟವನ್ನು ಇಡೀ ದೇಶವೇ ಗಂಭೀರವಾಗಿ ಎದುರಿಸುತ್ತಿರುವಾಗ, ಸರಕಾರ ಜನಗಳ ಜೊತೆ ನಿಂತು ಜನತೆಯ ಹಾಗೂ ದೇಶದ ಆರ್ಥಿಕ ಸಂಕಷ್ಟ ಹಾಗೂ ಆರೋಗ್ಯ ರಕ್ಷಣೆಗೆ ತೊಡಗಬೇಕಾದ ಸಂದರ್ಭದಲ್ಲಿ ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸಿ ಜನತೆಗೆ ನೆರವಾಗುವ ಬದಲು, ಜನತೆಯನ್ನು ಆರೋಗ್ಯ ಹಾಗೂ ಆರ್ಥಿಕ ಸಂಕಷ್ಟದಲ್ಲಿಯೇ ಬಿಟ್ಟು, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ಅವಕಾಶ ನೀಡಿದಂತಾಗುತ್ತಿದೆ ಹಾಗೂ ಜನ ವಿರೋಧಿ ನೀತಿಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಅಂತಹ ನೀತಿಗಳನ್ನು ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿದರು.

    ಜನತೆ ಹಾಗೂ ದೇಶವನ್ನು ಕೋವಿಡ್ – 19 ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು, ಕೆಳ ಕಂಡ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಲವಾಗಿ ಒತ್ತಾಯಿಸುತ್ತೇವೆ. ವಿಶೇಷ ಪ್ಯಾಕೇಜ್ ಘೋಷಿಸಬೇಕು ಮತ್ತು ಜನದ್ರೋಹಿ ತಿದ್ದುಪಡಿ ಕಾಯ್ದೆಗಳನ್ನು ಹಾಗೂ ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕು. ಸುರಕ್ಷತಾ ಸಾಮಗ್ರಿಗಳ ಕಿಟ್‍ನ್ನು ಒದಗಿಸಬೇಕು. ಕೋವಿಡ್ ವೈರಾಣುವನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರಿಕರಿಗೆ ಉಚಿತ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು.

    ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ.3 ರಷ್ಟು ಅಂಶವನ್ನು ವೆಚ್ಚ ಮಾಡಲು ಕ್ರಮ ವಹಿಸಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಕನಿಷ್ಠ ಕೋವಿಡ್ 19 ಸಮಸ್ಯೆ ಇತ್ಯರ್ಥವಾಗುವವರೆಗೆ ಮಾಸಿಕವಾಗಿ ಎಲ್ಲಾ ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಸಮಗ್ರ ಅಹಾರ ಸಾಮಗ್ರಿಗಳನ್ನು ಒದಗಿಸುವುದರ ಜೊತೆಗೆ ಮತ್ತಿತರ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ.

    ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಎಲ್.ಎಸ್.ಸುಕನ್ಯ, ದಲಿತಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಟಿ.ಸಂಜೀವಮೂರ್ತಿ, ಬ್ಯಾಟಪ್ಪ, ಟಿ.ಮಂಜುಳ, ಹೆಚ್.ಡಿ.ಜಯಣ್ಣ, ತಾಲ್ಲೂಕು ಮತ್ತು ಕಟ್ಟಡ ಕಾರ್ಮಿಕರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link