ಚಿತ್ರದುರ್ಗ:
ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯ ಪರಿಣಾಮ ಮಲ್ಲಾಪುರ ಕೆರೆ ಕೋಡಿ ಬಿದ್ದು, ಸುತ್ತಮುತ್ತಲಿನ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವುದನ್ನು ಉಪವಿಭಾಗಾಧಿಕಾರಿ ಪ್ರಸನ್ನ, ಚಿತ್ರದುರ್ಗ ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ ಇವರುಗಳು ಗುರುವಾರ ವೀಕ್ಷಿಸಿದರು.
ಮಲ್ಲಾಪುರ ಹಾಗೂ ಮಲ್ಲಾಪುರ ಗೊಲ್ಲರಹಟ್ಟಿ ಗ್ರಾಮದ ಮನೆಗಳಿಗೆ ಮಳೆ ನೀರು ನುಗ್ಗಿ ದಿನೋಪಯೋಗಿ ವಸ್ತುಗಳು ನಾಶವಾಗಿರುವುದನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿದ ಉಪವಿಭಾಗಾಧಿಕಾರಿ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಪರಿಹಾರ ನೀಡಲು ಸೂಕ್ತ ದಾಖಲೆಗಳನ್ನು ಒದಗಿಸುವಂತೆ ತಿಳಿಸಿ ಇನ್ನು ಮುಂದೆ ಮಳೆ ನೀರು ಮನೆಗಳಿಗೆ ನುಗ್ಗದಂತೆ ತಡೆಗೋಡೆ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಂದಾಯ ನಿರೀಕ್ಷಕ ಶರಣಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ