ಚೇಳೂರು :
ಗುಬ್ಬಿ ತಾಲ್ಲೂಕು ಚೇಳೂರಿನ ಟಿಸಿಬಿ ರಸ್ತೆಯಲ್ಲಿ ಕೆಲ ದಿನಗಳಿಂದ ಚರಂಡಿ ನೀರು ಹರಿಯುತ್ತಿದ್ದರೂ ಅಧಿಕಾರಿಗಳೂ, ಜನಪ್ರತಿನಿಧಿಗಳು ಕಂಡೂ ಕಾಣದಂತಿದ್ದಾರೆ.
ಈ ರಸ್ತೆಯಲ್ಲಿ ಪ್ರತಿನಿತ್ಯ ಹೆಚ್ಚಿನ ವಾಹನಗಳ ಸಂಚಾರವಿರುತ್ತದೆ. ಆನರ ಓಡಾಟವೂ ಹೆಚ್ಚಾಗಿದೆ. ರಸ್ತೆಯಲ್ಲಿ ಹರಿಯುವ ಕೊಳಚೆ ನೀರಿನಲ್ಲಿ ಓಡಾಡುವಂತಹ ಪರಿಸ್ಥಿತಿ ಬಂದಿದೆ.
ರೋಗರುಜಿನಗಳ ಭೀತಿ ನಡುವೆ ಈ ಕೊಳಚೆ ನಿರು ತುಳಿದು ಓಡಾಡುವ ಸ್ಥಿತಿ ಬಂದಿರುವುದಕ್ಕೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟವರು ಗಮನ ಹರಿಸಿ ಸಮಸ್ಯೆ ನಿವಾರಿಸಲು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/11/IMG_20201124_075144-scaled-e1606284091685.jpg)