ಬೆಂಗಳೂರು :
ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆಂದು ತಿಳಿದುಬಂದಿದ್ದು, ಡಿಸೆಂಬರ್ ಮೂರನೇ ವಾರದಲ್ಲಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶಿಕ್ಷಣ ಇಲಾಖೆಯು ಈಗಾಗಲೇ ಶೇ.30 ರಷ್ಟು ಪಠ್ಯವನ್ನು ಕಡಿತ ಮಾಡಿದೆ. ಆದರೆ ಶಾಲೆ ಆರಂಭವಾಗದೇ ಇರುವುದರಿಂದ ಮತ್ತಷ್ಟು ಪಠ್ಯ ಕಡಿತ ಮಾಡುವ ಸಾಧ್ಯತೆ ಇದೆ. ಜೊತೆಗೆ ಡಿಸೆಂಬರ್ 3 ನೇ ವಾರದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
