ಥಾಣೆ :
26 ವರ್ಷದ ಇಡ್ಲಿ ವ್ಯಾಪಾರಿಯನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಥಾಣೆ ಜಿಲ್ಲೆಯ ಮೀರಾ ರಸ್ತೆಯಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ನನ್ನು ವೀರೇಂದ್ರ ಯಾದವ್(23) ಇಲ್ಲಿನ ಮೀರಾ ರಸ್ತೆಯಲ್ಲಿ ತಳ್ಳುಗಾಡಿಯಲ್ಲಿ ಇಡ್ಲಿ ಉಪಹಾರದ ವ್ಯಾಪಾರ ಮಾಡುತ್ತಿದ್ದ. ಶುಕ್ರವಾರ, ಮೂವರು ಗ್ರಾಹಕರು ಅವರ ರಸ್ತೆ ಬದಿಯ ಹೋಟೆಲ್ಗೆ ಬಂದಿದ್ದರು. ಆಗ ಅವರಿಗೆ ಹೋಟೆಲ್ ಮಾಲೀಕ ‘ನೀವು ನನಗೆ 20 ರೂಪಾಯಿ ಬಾಕಿ ಕೊಡುವುದಿದೆ’ ಎಂದು ವೀರೇಂದ್ರ ನೆನಪಿಸಿದ್ದಾನೆ. ಇದೇ ಕಾರಣಕ್ಕೆ ಜಗಳ ಆರಂಭವಾಗಿದೆ.
ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಈ ಮೂವರ ನಡುವೆ ತಳ್ಳಾಟ ನಡೆದಿದೆ, ಈ ವೇಳೆ ಒಬ್ಬಾತ ವಿರೇಂದ್ರ ಯಾದವ್ ನನ್ನು ತಳ್ಳಿದ್ದಾನೆ. ಆ ರಭಸಕ್ಕೆ ಕಲ್ಲಿನ ಮೇಲೆ ಬಿದ್ದ ವೀರೆಂದ್ರ ನ ತಲೆಗೆ ಗಾಯವಾಗಿತ್ತು. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆತರುವ ವ್ಯವಸ್ಥೆ ಮಾಡಿದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಬಳಿಕ ಈ ಮೂರೂ ಗ್ರಾಹಕರು ತಲೆ ಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
