ಮೈಸೂರು :
ಹಳೇ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಎಲೆ ತೋಟದ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಗೌರಿಶಂಕರ್ ನಗರ ನಿವಾಸಿಗಳಾದ ಕಿರಣ್ (29) ಮತ್ತು ಕಿಶನ್ (29) ಬರ್ಬರವಾಗಿ ಕೊಲೆಯಾದವರು. ಈ ಘಟನೆಯಲ್ಲಿ ಮಧು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ತಿ ವಿಚಾರ ಮತ್ತು ಹಳೇ ದ್ವೇಷದ ಹಿನ್ನಲೆಯಲ್ಲಿ ಸ್ನೇಹಿತರ ಮತ್ತೊಂದು ತಂಡವೇ ಕೊಲೆ ಮಾಡಿದೆ ಎಂದು ಶಂಕಿಸಲಾಗಿದೆ. ಕತ್ತುಕೊಯ್ದು ಕೊಲೆ ಮಾಡಲಾಗಿದ್ದು, ಸೋಮವಾರ ಮುಂಜಾನೆ ರಕ್ತಸಿಕ್ತ ಮೃತದೇಹಗಳನ್ನು ನೋಡಿ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/Murder.jpg-robbery.jpg)