ನವದೆಹಲಿ:
ಕೇಂದ್ರ ಸರ್ಕಾರ ಜಲಿಯಾನ್ವಾಲಾ ಬಾಗ್ ಸ್ಮಾರಕವನ್ನು ಪುನರುಜ್ಜೀವನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಹುತಾತ್ಮ ಎಂಬುದರ ಅರ್ಥ ತಿಳಿಯದವರು ಮಾತ್ರ ಜಲಿಯನ್ ವಾಲಾಬಾಗ್ ಹುತಾತ್ಮರನ್ನು ಹೀಗೆ ಅವಮಾನ ಮಾಡಲು ಸಾಧ್ಯ. ನಾನು ಹುತಾತ್ಮರ ಮಗ. ಹುತಾತ್ಮರಿಗೆ ಮಾಡಿರುವ ಅವಮಾನವನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂಥ ಕ್ರೌರ್ಯದ ವಿರುದ್ಧ ನಾವೆಲ್ಲರೂ ಹೋರಾಡುತ್ತೇವೆ ಎಂದಿದ್ದಾರೆ.
जलियाँवाला बाग़ के शहीदों का ऐसा अपमान वही कर सकता है जो शहादत का मतलब नहीं जानता।
मैं एक शहीद का बेटा हूँ- शहीदों का अपमान किसी क़ीमत पर सहन नहीं करूँगा।
हम इस अभद्र क्रूरता के ख़िलाफ़ हैं। pic.twitter.com/3tWgsqc7Lx
— Rahul Gandhi (@RahulGandhi) August 31, 2021
ಪ್ರಧಾನಿ ನರೇಂದ್ರ ಮೋದಿ ಶನಿವಾರ ನವೀಕೃತ ಜಲಿಯಾನ್ ವಾಲಾಬಾಗ್ ಸ್ಮಾರಕವನ್ನು ಉದ್ಘಾಟಿಸಿ, ಇತಿಹಾಸವನ್ನು ರಕ್ಷಿಸುವುದು ದೇಶದ ಕರ್ತವ್ಯ ಎಂದಿದ್ದರು. ಹಿಂದಿನ ಘಟನೆಗಳು ನಮಗೆ ಅನೇಕ ಪಾಠಗಳನ್ನು ಕಲಿಸುತ್ತವೆ. ಹಾಗಯೇ, ದೇಶವನ್ನು ಮುನ್ನಡೆಸಲು ನಿರ್ದೇಶನ ನೀಡುತ್ತವೆ ಎಂದು ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
