ಬೆಂಗಳೂರು:

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಏಪ್ರಿಲ್ ನಲ್ಲಿ ಮುಷ್ಕರ ನಡೆಸಿದ್ದರು. ಮುಷ್ಕರದಲ್ಲಿ ಭಾಗಿಯಾಗಿದ್ದ 4,200 ಸಾರಿಗೆ ನೌಕರರನ್ನು ವಜಾಗೊಳಿಸಲಾಗಿತ್ತು.
ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನು ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








