ಬೆಂಗಳೂರು:
ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠ ಅಥವಾ ಬಾಬಾಬುಡನಗಿರಿ ಗುಹೆಯಲ್ಲಿ ಪೂಜಾ ವಿಧಿ-ವಿಧಾನಗಳನ್ನು ನಡೆಸಲು ಮುಜಾವರ್ ನೇಮಕ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಗೊಳಿಸಿದೆ.
2018 ಮಾರ್ಚ್ 19ರಂದು ಧಾರ್ಮಿಕ ದತ್ತಿ ಇಲಾಖೆ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಎಂಬುವವರನ್ನು ನೇಮಕ ಮಾಡಿತ್ತು. ಇಲಾಖೆ ಆದೇಶವನ್ನು ಪ್ರಶ್ನಿಸಿ ಶ್ರೀಗುರು ದತ್ತಾತ್ರೆಯ ಪೀಠ ದೇವಸ್ಥಾನ ಸಂವಧರ್ನಾ ಸಮಿತಿ ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ದತ್ತಪೀಠದ ಪೂಜಾ ವಿಧಿ-ವಿಧಾನಗಳ ಬಗ್ಗೆ ಯಾವುದೇ ಆತುರದ ನಿರ್ಧಾರ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.
ಇದೀಗ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ನೇತೃತ್ವದ ಪೀಠ ಮುಜಾವರ್ ನೇಮಕ ಆದೇಶವನ್ನು ರದ್ದುಗೊಳಿಸಿದ್ದು, ದತ್ತಪೀಠದ ಪೂಜಾ ವಿಧಿ-ವಿಧಾನ ಸಂಬಂಧ ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆದೇಶ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/09/Dattha-peeta.jpg)