ಗುಬ್ಬಿ :
ತಾಲ್ಲೂಕಿನ ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಕೆಲವು ದಿನಗಳಿಂದ ಭೀತಿಯನ್ನು ಹುಟ್ಟಿಸಿದ್ದ ಹೆಣ್ಣು ಚಿರತೆಯು ಬುಧವಾರ ರಾತ್ರಿ ಕಾರೇಹಳ್ಳಿ ಗೇಟ್ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ.
ಗುಬ್ಬಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಸಾಗಿಸಿದೆ. ಇದರಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ